ಅಶ್ವತ್ಥ ನಾರಾಯಣ ರಾಜೀನಾಮೆಗೆ HDK ಆಗ್ರಹ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (14:03 IST)
ವಿಧಾನಸಭೆಯಲ್ಲಿ ಸಚಿವ ಅಶ್ವತ್ಥ ನಾರಾಯಣ ಹಾಗೂ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ನಡುವೆ ಕಾವೇರಿದ ವಾಗ್ವಾದ, ಏಕವಚನದ ಬೈದಾಟಕ್ಕೆ ಕಾರಣವಾಗಿದ್ದ ಬಿಎಂಎಸ್​ ಟ್ರಸ್ಟ್​ ವಿವಾದ ಸದ್ಯಕ್ಕೆ ತಣ್ಣಗಾಗುವಂತೆ ಕಾಣಿಸುತ್ತಿಲ್ಲ. ವಿವಾದದ ಬಗ್ಗೆ  ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ, ಬಿಎಂಎಸ್ ಟ್ರಸ್ಟ್​ನ ಮೂಲ ಡೀಡ್ ಉಲ್ಲೇಖಿಸಿ ಆಡಳಿತಾರೂಢ ಬಿಜೆಪಿ ಸರ್ಕಾರ ಹಾಗೂ ಸಚಿವ ಅಶ್ವತ್ಥ ನಾರಾಯಣಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಬಿಎಂಎಸ್ ಟ್ರಸ್ಟ್​ನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ ಮತ್ತು ಆ ಟ್ರಸ್ಟ್‌ನ ಎಲ್ಲ ಸ್ವತ್ತುಗಳನ್ನು ರಾಜ್ಯ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಎಚ್​ಡಿಕೆ ಆಗ್ರಹಿಸಿದ್ದಾರೆ. ಟ್ರಸ್ಟಿನಲ್ಲಿ ಸರಕಾರದ ಟ್ರಸ್ಟಿಗೇ ಕೊಕ್ ಕೊಟ್ಟು, ಈ ಟ್ರಸ್ಟಿನಲ್ಲಾಗುತ್ತಿದ್ದ ಗೋಲ್ʼಮಾಲ್ ಬಗ್ಗೆ ಸರಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿ ಡಾ.ಮಂಜುಳಾ ಮತ್ತು ಇನ್ನೊರ್ವ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರು ಬರೆದ ಪತ್ರಗಳನ್ನು ಕಸದಬುಟ್ಟಿಗೆ ಹಾಕಿದ್ದು ಏಕೆ? ಇದರ ಹಿಂದಿನ ಹುನ್ನಾರ ಏನು ಉನ್ನತ ಶಿಕ್ಷಣ ಸಚಿವರೇ? ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯೋ ಹೀಗೂ ಆಗುತ್ತಾ.. ಹೋಟೆಲ್ ನಲ್ಲಿ ಮೊಟ್ಟೆ ತಿಂದ ವ್ಯಕ್ತಿಯ ಕತೆ ಏನಾಯ್ತು ನೋಡಿ Video

ಗೋಮೂತ್ರವೆಂದು ತಮಾಷೆ ಮಾಡಿದ್ದ ಪ್ರಿಯಾಂಕ ಗಾಂಧಿ: ನೀವೂ ಸ್ವಲ್ಪ ಬಳಸಿ ಶುದ್ಧರಾಗ್ತೀರಿ ಎಂದ ಅನುರಾಗ್ ಠಾಕೂರ್ Video

ಅಲ್ಲಾರೀ.. ಬಾಂಗ್ಲಾ ಅಕ್ರಮ ವಲಸಿಗನಿಗಾಗಿ ಭಾರತೀಯನನ್ನು ಬಂಧಿಸುತ್ತೀರಾ: ಗೃಹ ಇಲಾಖೆಗೆ ಪರೋಕ್ಷ ಚಾಟಿ ಬೀಸಿದ ನ್ಯಾ. ನಾಗಪ್ರಸನ್ನ

ಕರ್ನಾಟಕಕ್ಕೆ ಯಾರೆಲ್ಲಾ ನೂತನ ಸಚಿವರು, ಇಂದು ರಾಹುಲ್ ಗಾಂಧಿ ಫೈನಲ್ ಕಾಲ್

ಕಾಕ್ರೋಚ್ ಪಾರ್ಟಿ ಸುಪ್ರೀಂಕೋರ್ಟ್ ನಿಂದಲೂ ದೊಡ್ಡವರೇ: ಸೌರವ್ ದಾಸ್ ಹೇಳಿಕೆಗೆ ನೆಟ್ಟಿಗರ ಕಿಡಿ video

ಮುಂದಿನ ಸುದ್ದಿ
Show comments