Publish Date: Mon, 03 Jul 2023 (17:25 IST)
Updated Date: Mon, 03 Jul 2023 (19:29 IST)
ವೈಎಸ್ಟಿ, ವಿಎಸ್ಟಿ ಟ್ಯಾಕ್ಸ್ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪ ಮಾಡಿರುವುದಕ್ಕೆ ಕ್ರೀಡಾ ಸಚಿವ ನಾಗೇಂದ್ರ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅವರು ಎರಡು ಬಾರಿ ಸಿಎಂ ಆಗಿದ್ದವರು. ಸಿಎಂ ಆಗಿದ್ದಾಗ ಇಲಾಖೆ ಯಾವ ರೀತಿ ನಡೆಸಿದ್ರು ಎಂಬುದು ಗೊತ್ತಿದೆ. ಸಿಎಂ ಸುಪುತ್ರ ಯಾವುದರಲ್ಲಿಯೂ ಹಸ್ತಕ್ಷೇಪ ಮಾಡಿಲ್ಲ.. ಆದರೂ ಹೆಚ್ಡಿಕೆ ಗಾಳಿಯಲ್ಲಿ ಗುಂಡು ಹೊಡಿಯುವ ಕೆಲಸ ಮಾಡುತ್ತಾರೆ. ಅದಕ್ಕೆ ವಿಧಾನಸಭೆ ಚುನಾವಣೆಯಲ್ಲಿ 19 ಸ್ಥಾನಕ್ಕೆ ಇಳಿದಿದ್ದಾರೆ.. ಇದೇ ರೀತಿಯ ವರ್ತನೆ ಮುಂದುವರೆದರೆ ಜನ ಮುಂದೆಯೂ ಪಾಠ ಕಲಿಸ್ತಾರೆ. ವರ್ಗಾವಣೆ ಕೇಳಿದಾಗ ಶಿಫಾರಸು ಮಾಡೋದು ಸಹಜ.. ಮಾಜಿ ಸಿಎಂ ಹೇಳಿಕೆ ಹಾಸ್ಯಾಸ್ಪದ ಎಂದು ತಿರುಗೇಟು ನೀಡಿದ್ದಾರೆ