Publish Date: Thu, 27 Feb 2020 (11:23 IST)
Updated Date: Thu, 27 Feb 2020 (11:25 IST)
ಬೆಂಗಳೂರು : ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹಿನ್ನಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿಎಂಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಅವರು ಆಪ್ತ ಸಹಾಯಕನ ಮೂಲಕ ಹಾರ, ಶಾಲು, ಹಣ್ಣು ನೀಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. “ಬಿಎಸ್ ವೈ ಹೋರಾಟದ ಮೂಲಕವೇ ರಾಜಕೀಯ ನೆಲೆ ಕಂಡುಕೊಂಡು ಉನ್ನತ ಸ್ಥಾನಕ್ಕೇರಿದವರು , ವಯಸ್ಸು 77 ಆದರೂ 18ರ ಯುವಕನಂತೆ ಚೈತನ್ಯದ ಚೆಲುವೆಯಾಗಿದ್ದಾರೆ. ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ನಿಮ್ಮ ಗುರಿ ಈಡೇರಲೆಂದು ಹಾರೈಸುತ್ತೇನೆ. ನೂರು ಕಾಲ ಬಾಳಿ, ಹೆಚ್ಚಿನ ಉನ್ನತ ಸ್ಥಾನಕ್ಕೇರಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.