Webdunia - Bharat's app for daily news and videos

Install App

ಪ್ರೀತಿಗೆ ನಿರಾಕರಿಸಿದ ಅಪ್ರಾಪ್ತೆಗೆ ಬೆಂಕಿ ಇಟ್ಟರು

Webdunia
ಸೋಮವಾರ, 3 ಡಿಸೆಂಬರ್ 2018 (20:00 IST)
ಪ್ರೀತಿಸಲು‌ ನಿರಾಕರಿಸಿ, ಪೋಷಕರಿಗೆ  ವಿಷಯ ತಿಳಿಸಿದ ಕಾರಣ  ಬಾಲಕಿಗೆ ಬೆಂಕಿ ಇಟ್ಟ ಘಟನೆ ನಡೆದಿದೆ. 

ವಿಜಯಪುರ ‌ಜಿಲ್ಲೆ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.  
14 ವರ್ಷದ ಅಪ್ರಾಪ್ತೆಗೆ ಪ್ರೀತಿಸು ಎಂದು ಇಬ್ಬರು ಬೆನ್ನು ಬಿದ್ದಿದ್ದರು. ಆ ಇಬ್ಬರಿಂದ ಕೃತ್ಯವೆಂದು‌ ಮೃತ ಬಾಲಕಿ ಪೋಷಕರ ಆರೋಪವಾಗಿದೆ.

ಪ್ರಾಜಕ್ತಾ ಬಲಭೀಮ ನರಳೆ 14 ಬೆಂಕಿಗೆ ಬಲಿಯಾದ ಅಪ್ರಾಪ್ತ ಬಾಲಕಿಯಾಗಿದ್ದಾಳೆ.
ರತ್ನಾಪುರ ಗ್ರಾಮದ ವಿವಾಹಿತ ವ್ಯಕ್ತಿ ಶಂಕರ ಹಿಪ್ಪರಕರ  24 ಹಾಗೂ ಮೋಹನ್ ಎಡವೆ 19 ಎಂಬುವವರಿಂದ ಕೃತ್ಯ ನಡೆದಿದೆ ಎಂದು ಆರೋಪ ಮಾಡಲಾಗುತ್ತಿದೆ.

ಕೆಲವು‌ ದಿನಗಳಿಂದಲೂ‌  ಪ್ರೀತಿಸಬೇಕೆಂದು ಅಪ್ರಾಪ್ತೆಗೆ ಕಿರುಕುಳ ನೀಡುತ್ತಿದ್ದರಂತೆ. ಇಬ್ಬರ ಪ್ರೀತಿಗೆ ಬಾಲಕಿ ನಿರಾಕರಿಸಿದ್ದಳಂತೆ. ಇಬ್ಬರ ಕಿರುಕುಳ ಅತಿಯಾದ ವೇಳೆಯಲ್ಲಿ ಬಾಲಕಿ ತನ್ನ ಮನೆಯಲ್ಲಿ  ಕಳೆದ ಶುಕ್ರವಾರ ವಿಷಯ  ತಿಳಿಸಿದ್ದಾಳೆ. ನಂತರ ಶನಿವಾರ ಶಾಲೆ ಬಿಡಿಸಿ ಮನೇಲಿ ಬಾಲಕಿಯನ್ನು ಪೋಷಕರು ಇಟ್ಟಿದ್ದರು.

ಮನೇಲಿ ಬಾಲಕಿ ವಿಷಯ ತಿಳಿಸಿದ್ದಾಳೆಂದು ತಿಳಿದ ಇಬ್ಬರು, ಬೆಂಕಿ ಹಚ್ಚಿರುವ ಆರೋಪ ಕೇಳಿಬಂದಿದೆ. ಈ ಕುರಿತು ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments