Webdunia - Bharat's app for daily news and videos

Install App

ವಿದ್ಯಾರ್ಥಿಗಳನ್ನ ಪತ್ತೆ ಮಾಡಿ ಲಸಿಕೆ ನೀಡಲು ಆರೋಗ್ಯ ಇಲಾಖೆ ಸೂಚನೆ

Webdunia
ಬುಧವಾರ, 8 ಸೆಪ್ಟಂಬರ್ 2021 (19:16 IST)
ಲಸಿಕೆಯಿಂದ ದೂರ ಉಳಿದಿರುವ ವಿದ್ಯಾರ್ಥಿಗಳನ್ನು ಶೀಘ್ರ ಪತ್ತೆ ಮಾಡಿ ಲಸಿಕೆ ನೀಡುವಂತೆ ರಾಜ್ಯ ಆರೋಗ್ಯ ಇಲಾಖೆಯು ಕಾಲೇಜು ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ವಿದ್ಯಾರ್ಥಿಗಳು ಅಥವಾ ಪೋಷಕರಿಗೆ ಕರೆ ಮಾಡಿ ಯಾಕೆ ಈವೆರೆಗೂ ಲಸಿಕೆ ಪಡೆದಿಲ್ಲ ಎಂಬ ಮಾಹಿತಿ ಪಡೆದುಕೊಳ್ಳಬೇಕು. ದಾಸ್ತಾನು ಕೊರತೆಯಿಂದ ಲಸಿಕೆ ಸಿಕ್ಕರದಿದ್ದರೆ, ಅಂತಹ ಮತ್ತಷ್ಟು ವಿದ್ಯಾರ್ಥಿಗಳನ್ನು ಪತ್ತೆ ಮಾಡಿ ಕಾಲೇಜಿನಲ್ಲಿ ಲಸಿಕಾ ಶಿಬಿರ ಆಯೋಜಿಸಿ ಲಸಿಕೆ ನೀಡಬೇಕು. ಇತರೆ ತಪ್ಪು ಕಲ್ಪನೆ ಇದ್ದರೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಡಳಿತದ ಮೂಲಕ ಕಾಲೇಜುಗಳಿಗೆ ಮಾಹಿತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದರು.
 
 
ವಿದ್ಯಾರ್ಥಿಗಳು ಲಸಿಕೆಯಿಂದ ದೂರ ಉಳಿಯಲು ಕಾರಣಗಳಿವು:
*ದಾಸ್ತಾನು ಕೊರತೆ, ಸಕಾಲಯದಲ್ಲಿ ಲಸಿಕೆ ಸಿಗದಿರುವುದು.
*ಇತ್ತೀಚೆಗೆ ಸೋಂಕು ತಗುಲಿದ್ದು, ಮೂರು ತಿಂಗಳವರೆಗೂ ಲಸಿಕೆ ಸಾಧ್ಯವಾಗದಿರುವುದು.
*ಭೌತಿಕ ತರಗತಿಗಳಿಗೆ ಹಾಜರಾಗಲು ಇಷ್ಟವಿಲ್ಲದೆ ಲಸಿಕೆಯಿಂದ ದೂರ ಸಾಧ್ಯತೆ.
*ಲಸಿಕೆ ಕುರಿತು ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿರುವ ತಪ್ಪುಕಲ್ಪನೆಗಳು.
*ಕಾಲೇಜುಗಳಲ್ಲಿ ಪ್ರತ್ಯೇಕ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳದಿರುವುದು.
*ಲಸಿಕೆ ಪಡೆಯಲು ಕಾಲೇಜು ಪ್ರಾಶುಂಪಾಲರಿAದ ಕಡ್ಡಾಯ ಆದ್ಯತಾ ಪತ್ರ ತರಬೇಕೆಂಬ ನಿಮಯ.
 
ಲಸಿಕೆ ಪಡೆಯದ ಪದವಿ ಕಾಲೇಜು ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಕ್ಕೆ ಕಾಲೇಜುಗಳಿಗೆ ಸೂಚಿಸಲಾಗಿದೆ. ಶೀಘ್ರದಲ್ಲಿಯೇ ಎಲ್ಲಾ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಾಗುವುದು. ಎಲ್ಲೆಡೆ ಲಸಿಕೆ ಶಿಬಿರಗಳು ನಡೆಯುತ್ತಿದ್ದು, ಕಾಲೇಜು ಲಸಿಕಾ ಶಿಬಿರಕ್ಕೆ ಕಾಯದೇ ವಿದ್ಯಾರ್ಥಿಗಳು ನೇರವಾಗಿ ತೆರಳಿ ಲಸಿಕೆ ಪಡೆಯಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments