Bengaluru Rains: ಬೆಂಗಳೂರಿನಲ್ಲಿ ಇದ್ದಕ್ಕಿದ್ದಂತೆ ಬಂದ ಗಾಳಿ, ಮಳೆಗೆ ಜನ ಕಕ್ಕಾಬಿಕ್ಕಿ

Krishnaveni K
ಗುರುವಾರ, 11 ಸೆಪ್ಟಂಬರ್ 2025 (09:18 IST)
ಬೆಂಗಳೂರು: ಹಗಲಿಡೀ ಬಿಸಿಲು, ಸೆಖೆ ರಾತ್ರಿ ಇದ್ದಕ್ಕಿದ್ದಂತೆ ಬಂದ ಗಾಳಿ, ಗುಡುಗು ಸಹಿತ ಮಳೆಗೆ ಬೆಂಗಳೂರು ಜನ ಕಕ್ಕಾಬಿಕ್ಕಿಯಾಗಿದ್ದಾರೆ. ರಾತ್ರಿ ಸುರಿದ ದಿಡೀರ್ ಮಳೆಗೆ ರಸ್ತೆಗಳು ಜಲಾವೃತವಾಗಿದೆ.

ಕೆಆರ್ ಪುರಂ, ಹೆಬ್ಬಾಳ, ಜಯನಗರ, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ಅನೇಕ ಕಡೆ ನಿನ್ನೆ ರಾತ್ರಿ ಮಳೆಯಾಗಿದೆ. ನಿನ್ನೆ ಸಂಜೆ ವೇಳೆಗೆ ನಗರದಲ್ಲಿ ದಟ್ಟ ಮೋಡ ಕವಿದ ವಾತಾವರಣವಿತ್ತು. ರಾತ್ರಿ 9 ಗಂಟೆ ನಂತರ ಭಾರೀ ಗಾಳಿ, ಗುಡುಗು ಸಹಿತ ಮಳೆ ಆರಂಭವಾಗಿದೆ.

ಇದರಿಂದಾಗಿ ಹಲವು ಕಡೆಗೆ ರಸ್ತೆಗಳಲ್ಲಿ ನೀರು ತುಂಬಿದ್ದು, ಇಂದು ಬೆಳ್ಳಂ ಬೆಳಿಗ್ಗೆಯೇ ವಾಹನ ಸವಾರರು ಪರದಾಡುವಂತಾಗಿದೆ. ಅನೇಕ ಕಡೆ ಮಳೆ ನೀರು ನಿಂತು ಸಂಚಾರಕ್ಕೆ ತಡೆಯಾಗಿರುವುದಾಗಿ ಸಂಚಾರಿ ಪೊಲೀಸರು ಹೇಳಿದ್ದಾರೆ.

ರಾಮಮೂರ್ತಿ ನಗರ, ಕಸ್ತೂರಿ ನಗರ, ರಾಯಸಂದ್ರ ಜಂಕ್ಷನ್ ಬಳಿ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಸಂಚಾರಿ ಪೊಲೀಸರು ಪ್ರಕಟಣೆ ನೀಡಿದ್ದಾರೆ. ಇಂದೂ ಬೆಳಿಗ್ಗೆಯೇ ಮೋಡ ಕವಿದ ವಾತಾವರಣವಿದ್ದು ಅಪರಾಹ್ನದ ನಂತರ ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ದಸರಾ-ದೀಪಾವಳಿಗೆ ಕರ್ನಾಟಕಕ್ಕೆ ₹3705 ಕೋಟಿ ಕೇಂದ್ರದ ಕೊಡುಗೆ: ಪ್ರಲ್ಹಾದ ಜೋಶಿ

Karnataka Weather: ಮೂರು ದಿನ ವರುಣನ ಆರ್ಭಟ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಮುಂದಿನ ಸುದ್ದಿ
Show comments