ಮತ್ತೆ 4 ದಿನ ರಾಜ್ಯಕ್ಕೆ ಭಾರೀ ಮಳೆ : ಎಚ್ಚರಿಕೆ

Webdunia
ಮಂಗಳವಾರ, 27 ಜುಲೈ 2021 (08:19 IST)
ಬೆಂಗಳೂರು (ಜು.27):  ಹವಾಮಾನ ಏರಿಳಿತದಿಂದಾಗಿ ರಾಜ್ಯದಲ್ಲಿ ಜು.30ರವರೆಗೆ ಮತ್ತೆ ಭಾರಿ ಪ್ರಮಾಣದಲ್ಲಿ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

•ಹವಾಮಾನ ಏರಿಳಿತದಿಂದಾಗಿ ರಾಜ್ಯದಲ್ಲಿ ಜು.30ರವರೆಗೆ ಮತ್ತೆ ಭಾರಿ ಮಳೆ
• ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ
ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಅಬ್ಬರಿಸಿದ ಮಳೆಯಿಂದಾಗಿ ಜನರು ಸಂಕಷ್ಟದಲ್ಲಿ ಸಿಲುಕಿ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಮ್ಮೆ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮೇಲ್ಮೈ ಸುಳಿಗಾಳಿ ಸೋಮವಾರ ತುಸು ತೀವ್ರಗೊಂಡಿದೆ. ಇದರ ತೀವ್ರತೆ ಜು.28ರಂದು ಮತ್ತಷ್ಟುಹೆಚ್ಚಾಗಿ ಬಂಗಾಳ ಕೊಲ್ಲಿಯಲ್ಲಿ ಉತ್ತರ ಭಾಗದಲ್ಲಿ ವಾಯುಭಾರ ಸೃಷ್ಟಿಯಾಗುವ ಸಾಧ್ಯತೆ ಇದೆ.
3 ಸಾವು, 131 ಹಳ್ಳಿಗಳಿಗೆ ಅಪಾಯ, ಕರ್ನಾಟಕದ ಪ್ರವಾಹ ಜಿಲ್ಲಾವಾರು ಮಾಹಿತಿ
ಇದರ ಪ್ರಭಾವದಿಂದ ಜು.30ರವರೆಗೆ ಮಲೆನಾಡು ಭಾಗ, ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಜೋರಾದ ಮಳೆ ಆಗುವ ಸಂಭವವಿದೆ. ಮಂಗಳೂರು- ಕಾರವಾರ ಭಾಗದ ಸಮುದ್ರದಲ್ಲಿ ಸುಮಾರು 3.5 ಮೀಟರ್ ಎತ್ತರದ ಅಲೆಗಳು ತೀರಕ್ಕೆ ಬಂದಪ್ಪಳಿಸಲಿವೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಮೂರು ಜಿಲ್ಲೆ ವ್ಯಾಪ್ತಿಯಲ್ಲಿ ಮಾತ್ರ ಅಧಿಕ ಮಳೆಯಾಗಿದೆ. ಕೊಡಗಿನ ಭಾಗಮಂಡಲದಲ್ಲಿ 13 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸುಬ್ರಹ್ಮಣ್ಯದಲ್ಲಿ 11 ಸೆಂ.ಮೀ, ಪುತ್ತೂರು ಮತ್ತು ಉಪ್ಪಿನಂಗಡಿ ತಲಾ 10, ಸುಳ್ಯ ಮತ್ತು ಕೊಡಗಿನ ವಿರಾಜಪೇಟೆಯಲ್ಲಿ ತಲಾ 9, ದಕ್ಷಿಣ ಕನ್ನಡದ ಮಂಗಳೂರು ನಗರ, ಬೆಳ್ತಂಗಡಿ, ಧರ್ಮಸ್ಥಳ 8, ಹಾಗೂ ಶಿವಮೊಗ್ಗದ ಆಗುಂಬೆಯಲ್ಲಿ 7 ಸೆಂ.ಮೀ. ಮಳೆ ದಾಖಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ
Show comments