ಮೈಸೂರಿನಲ್ಲಿ ವರುಣನ ಆರ್ಭಟ: ಕೆರೆ ಕಟ್ಟೆಗಳು ಒಡೆದು ಮನೆಗಳಿಗೆ ನುಗ್ಗಿದ ನೀರು

Webdunia
ಬುಧವಾರ, 27 ಸೆಪ್ಟಂಬರ್ 2017 (16:39 IST)
ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವ ಬೆನ್ನಲ್ಲೇ ನಗರದಲ್ಲಿ ಕಳೆದೆರಡು ದಿನಳಿಂಗ ಭಾರೀ ಮಳೆಯಾಗುತ್ತಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಭಾರೀ ಅವಾಂತರ ಸೃಷ್ಟಿಯಾಗಿದೆ.

ನಗರದ ಹಲವೆಡೆ ಮರಗಳು ಧರೆಗುರುಳಿದ್ದು, ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು. ಎಡಬಿಡದೆ ಸುರಿಯುತ್ತಿರೋ  ಭಾರೀ ಮಳೆಯಿಂದ ಅಲೀಂ ನಗರದಲ್ಲಿ ಕಾಂಪೌಂಡ್ ಕುಸಿದು ಬಿದ್ದು ನಾಲ್ವರಿಗೆ ಗಾಯಗಳಾಗಿವೆ. ಸ್ಲಂ ಬೋರ್ಡ್ ಒಂದನೇ ಬ್ಲಾಕ್ ನಲ್ಲಿ ಮನೆಗಳು ಬಿರುಕು ಬಿಟ್ಟಿವೆ. ಇಲ್ಲಿನ ನಿವಾಸಿಗಳು ಕಟ್ಟಡ ಕುಸಿಯುವ ಆತಂಕದಲ್ಲಿದ್ದಾರೆ. ಇದೇ ರೀತಿ ಗುಂಡೂರಾವ್ ನಗರ, ಪಡುವಾರಹಳ್ಳಿ, ಗೌಸಿಯಾನಗರ ಸೇರಿ ಹಲವು ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ.

ಹೂಟಗಳ್ಳಿಯ ಸೈಲೆಂಟ್ ಶೋರ್ ರೆಸಾರ್ಟ್ ಪಕ್ಕದ ಕೆರೆ ಒಡೆದು ಭಾರೀ ಹಾನಿ ಸಂಭವಿಸಿದೆ. ಮಳೆರಾಯನ ಆರ್ಭಟಕ್ಕೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಗೋಣಿಕೆರೆ ಒಡೆದು ಮನೆಗೆ ನೀರು ನುಗ್ಗಿದೆ. ವರುಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕನಕಗಿರಿ, ಗುಂಡೂರಾವ್ ನಗರ ಕೆರೆಯಂತಾಗಿದೆ.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೆಟ್ಟಿಲಿನಲ್ಲಿ ಜಲಪಾತದ ರೀತಿಯಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿರುವುದು ಕಂಡು ಬಂತು. ಮಳೆಯ ರುದ್ರ ನರ್ತನಕ್ಕೆ ಬಹುತೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಜೆ.ಸಿ.ನಗರ ಬಹುತೇಕ ಜಲಾವೃತಗೊಂಡಿದ್ದು, ರಸ್ತೆಗಳಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಚಾಮುಂಡಿ ಬೆಟ್ಟದ ಮೇಲ್ಭಾಗದಿಂದ ಹರಿದುಬಂದ ಭಾರೀ ಪ್ರಮಾಣದ ನೀರು ಬೆಟ್ಟದ ತಪ್ಪಲಿನಲ್ಲಿರುವ ತಾವರೆಕೆರೆ ತಲುಪಿ ಭರ್ತಿಯಾದ ಪರಿಣಾಮ ಕೆರೆ ಕೋಡಿ ಒಡೆದಿದೆ. ಇದರಿಂದ ಜನ ಕಂಗಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments