Publish Date: Tue, 07 May 2024 (17:46 IST)
Updated Date: Tue, 07 May 2024 (17:48 IST)
ಚಿಕ್ಕಮಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಧಾರಕಾರ ಮಳೆಯಾಗಿದೆ.
ಇನ್ನೂ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ ಇಂದು ಮಧ್ಯಾಹ್ನವೇ ಧಾರಾಕಾರ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಇಂದು ಮಧ್ಯಾಹ್ನ ಗುಡುಗು ಸಹಿತ ಆಲಿಕಲ್ಲು ಭಾರೀ ಮಳೆಯಾಗಿದೆ. ಕಳೆದೊಂದು ಗಂಟೆಯಿಂದ ನಿರಂತರ ಮಳೆಯಾಗುತ್ತಿದ್ದು, ಭಯಂಕರ ಮಳೆಯಿಂದ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನ ಭೂಮಿ ತಂಪಾಗಿದೆ.
ಇನ್ನೂ ಬೆಂಗಳೂರಿನಲ್ಲಿ ಮೋಡಕವಿದ ವಾತವರಣವಿದ್ದು, ಮಳೆಯಾಗುವ ಮುನ್ಸೂಚನೆಯಿದೆ.