Webdunia - Bharat's app for daily news and videos

Install App

ರಾಜಧಾನಿಯಲ್ಲಿ ಭಾರೀ ಮಳೆ ಮುನ್ಸೂಚನೆ ...

Webdunia
ಬುಧವಾರ, 3 ಆಗಸ್ಟ್ 2022 (14:07 IST)
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬುಧವಾರದಿಂದ ಆಗಸ್ಟ್ 7ರವರೆಗೆ ಮುಂಗಾರಿನ ಅಬ್ಬರ ಕಂಡು ಬರಲಿದೆ. ಈ ಐದು ದಿನ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಹುತೇಕ ಎಲ್ಲ ಕಡೆಗಳಲ್ಲಿ ವ್ಯಾಪಕ ಮಳೆ ಆಗಲಿದೆ.
 
ಬೆಳಗ್ಗೆಯಿಂದ ಮೋಡ ಮುಸುಕಿನ ವಾತಾವರಣ ಕಂಡು ಬಂದು, ಮಧ್ಯಾಹ್ನದ ನಂತರ ಮಳೆ ಸುರಿಯುವ ಸಾಧ್ಯತೆ ಇದೆ. ನಗರದ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆ, ಇನ್ನು ಹಲವು ಪ್ರದೇಶಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಬರಲಿದೆ.
 
 
ಆಗಸ್ಟ್ 5ಮತ್ತು 6ರಂದು ನಗರದಲ್ಲಿ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಅಂದು ಭಾರೀ ಮಳೆಯಿಂದ ಅತೀ ಭಾರೀ ಮಳೆ ಆಗುವ ಸಂಭವವಿದೆ. ಆ ಎರಡು ಬೆಂಗಳೂರಿಗೆ ಕ್ರಮವಾಗಿ 'ಯೆಲ್ಲೋ ಅಲರ್ಟ್' ಮತ್ತು 'ಆರೆಂಜ್ ಅಲರ್ಟ್' ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 
ವ್ಯಾಪಕ ಮಳೆ ಮುನ್ನೆಚ್ಚರಿಕೆ ಪಡೆದ ಈ ಐದಿನದಲ್ಲಿ ಬೆಂಗಳೂರಿನಲ್ಲಿ ಬಿಸಿಲಿನ ದರ್ಶನ ಅಷ್ಟಕಷ್ಟೆ ಎನ್ನಬಹುದು. ಈ ವೇಳೆ ತಂಪು ವಾತಾವರಣ ಕಂಡು ಬರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಂಭವ ಇದೆ.
 
ವ್ಯಾಪಕ ಮಳೆ ಮುನ್ನೆಚ್ಚರಿಕೆ ಪಡೆದ ಈ ಐದಿನದಲ್ಲಿ ಬೆಂಗಳೂರಿನಲ್ಲಿ ಬಿಸಿಲಿನ ದರ್ಶನ ಅಷ್ಟಕಷ್ಟೆ ಎನ್ನಬಹುದು. ಈ ವೇಳೆ ತಂಪು ವಾತಾವರಣ ಕಂಡು ಬರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಂಭವ ಇದೆ.
 
ಹವಾಮಾನ ವೈಪರಿತ್ಯ ಕಾರಣಕ್ಕೆ ವ್ಯಾಪಕ ಮಳೆ; ಛತ್ತೀಸ್‌ಗಢ ತಮಿಳುನಾಡು ಮಾರ್ಗವಾಗಿ ಕನ್ಯಾಕುಮಾರಿ ವರೆಗೆ ಮೇಲ್ಮೈ ಸುಳಿಗಾಳಿ ಎದ್ದಿದ್ದು, ಅದು ಸಮುದ್ರ ಮಟ್ಟದಿಂದ 900ಮೀಟರ್ ಎತ್ತರವಿದೆ. ಇನ್ನು ತಮಿಳುನಾಡು -ಆಂಧ್ರಪ್ರದೇಶದ ಕರಾವಳಿ ಮತ್ತು ಬಂಗಾಳಕೊಲ್ಲಿಯಲ್ಲಿ ಭಾಗದಲ್ಲಿ ಗಾಳಿ ತೀವ್ರತೆ ಹೆಚ್ಚಾಗಿದೆ. ಈ ಕಾರಣಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಅಧಿಕಾರಿ ಮತ್ತು ವಿಜ್ಞಾನಿ ಪ್ರಸಾದ್ ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments