Webdunia - Bharat's app for daily news and videos

Install App

ಹನಿಟ್ರ್ಯಾಪ್ ಬಗ್ಗೆ ಸದನದಲ್ಲಿ ಹೇಳಿದ್ದ ಸಹಕಾರ ಸಚಿವ ರಾಜಣ್ಣಗೆ ಭಾರಿ ಭದ್ರತೆ

Sampriya
ಶನಿವಾರ, 22 ಮಾರ್ಚ್ 2025 (14:55 IST)
ಕೋಲಾರ: ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಹೇಳಿ, ಸದ್ದು ಮಾಡಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಇಂದು ಕೋಲಾರ ನಗರಕ್ಕೆ ಭೇಟಿ ನೀಡಿದ್ದ ವೇಳೆ ಭಾರಿ ಭದ್ರತೆಯನ್ನು ಕಲ್ಪಿಸಲಾಗಿದೆ.  ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಸಿಪಿಐಗಳು ಹಾಗೂ ನೂರಾರು ಕಾನ್'ಸ್ಪೆಬಲ್'ಗಳನ್ನು ಸಚಿವರ ಭದ್ರತೆಗೆ ನಿಯೋಜಿಸಲಾಗಿದೆ.

ಸುದ್ದಿಗಾರರಿಗೆ ಹನಿಟ್ರ್ಯಾಪ್‌ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, 'ಎಲ್ಲವನ್ನೂ ವಿಧಾನಸಭೆ ಅಧಿವೇಶನದಲ್ಲಿ ವಿವರವಾಗಿ ಹೇಳಿದ್ದೇನೆ. ಅದನ್ನು ಬಿಟ್ಟು ಹೇಳುವಂಥದ್ದು ಏನೂ ಇಲ್ಲ. ಇಂಥ ಪ್ರಕರಣ ಮೊದಲೂ ಅಲ್ಲ; ಕೊನೆಯೂ ಅಲ್ಲ. ಮುಂದೆಯೂ ನಡೆಯುತ್ತಿರುತ್ತವೆ' ಎಂದರು.

ಬಿಜೆಪಿ ಶಾಸಕರು ಸ್ಪೀಕರ್ ಪೀಠಕ್ಕೆ ತೋರಿದ ಅಗೌರವದ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಈ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಪ್ಪು ಚುಕ್ಕೆ. ಜನಪರವಾದ ವಿಚಾರದಲ್ಲಿ ಗಲಾಟೆ ನಡೆದಿದ್ದರೆ ಒಪ್ಪುವಂಥದ್ದು. ಬಜೆಟ್ ಮೇಲಿನ ಉತ್ತರಕ್ಕೆ ಅಡ್ಡಿಪಡಿಸಿದ್ದಾರೆ. ಇದೊಂದು ಪೂರ್ವಯೋಜಿತ ಪಿತೂರಿ. ನಾನೇನಾದರೂ ಸ್ಪೀಕರ್ ಆಗಿದ್ದರೆ‌ ಮೊದಲೇ ಅಮಾನತುಗೊಳಿಸುತ್ತಿದ್ದೆ' ಎಂದು ಹೇಳಿದರು.

ರಾಜ್ಯ ಬಂದ್ ಬಗೆಗಿನ ಪ್ರಶ್ನೆಗೆ, ಬೆಂಗಳೂರಿನಲ್ಲಿ ಬಂದ್ ಮಾಡಿದರೆ ಬೆಳಗಾವಿಯಲ್ಲಿರುವ ಕನ್ನಡಿಗರಿಗೆ ರಕ್ಷಣೆ ಸಿಗುತ್ತದೆಯೇ ಎಂದು ಕೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments