Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ಧಾರಾಕಾರ ಮಳೆ!

Webdunia
ಮಂಗಳವಾರ, 12 ಅಕ್ಟೋಬರ್ 2021 (19:45 IST)
ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆ ಶುರುವಾಗಿದೆ. ನಗರದಲ್ಲಿ ಇಂದು ಸಹ ಧಾರಾಕಾರ ಮಳೆಯಾಗುತ್ತಿದೆ.

ವಿಧಾನಸೌಧ, ಕೆ.ಆರ್.ಸರ್ಕಲ್, ಯಶವಂತಪುರ, ಮಲ್ಲೇಶ್ವರಂ, ಸದಾಶಿವನಗರ, ಮತ್ತಿಕೆರೆ, ಹೆಬ್ಬಾಳ, ಯಲಹಂಕ ಸೇರಿದಂತೆ ಬೆಂಗಳೂರಿನ ಹಲವೆಡೆ ಮಳೆ ಭಾರಿ ಮಳೆಯಾಗುತ್ತಿದೆ. ಮಳೆಯ ನಡುವೆ ವಾಹನಗಳು ಸಂಚರಿಸುತ್ತಿವೆ. ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಅವಾಂತರವೇ ಸೃಷ್ಟಿಯಾಗಿತ್ತು. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಟ ಪಟ್ಟಿದ್ದರು. ಅದರಲ್ಲೂ ದೇವನಹಳ್ಳಿ ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಗಳಲ್ಲಿ ನೀರು ನಿಂತು ಪರದಾಡುವಂತಾಗಿತ್ತು.
ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಮಳೆಯಾಗಿದೆ. ಏರ್‌ಪೋರ್ಟ್ ಸುತ್ತಮುತ್ತ 131.1 ಮಿಲಿ ಮೀಟರ್ ಮಳೆಯಾಗಿದೆ.  ನಿನ್ನೆ ಒಂದೇ ರಾತ್ರಿ ಬರೋಬ್ಬರಿ 131.1 ಮಿ.ಮೀ. ಮಳೆಯಾಗಿದೆ.
ದೇವನಹಳ್ಳಿ ಸೇರಿದಂತೆ ಕೆಂಪೇಗೌಡ ಏರ್ಪೋರ್ಟ್ ಸುತ್ತಾಮುತ್ತ ಮತ್ತೆ ಮಳೆಯಾಗುತ್ತಿದೆ. ಕಳೆದ ರಾತ್ರಿಯಷ್ಟೆ ಏರ್ಪೋರ್ಟ್ನಲ್ಲಿ ಅಬ್ಬರಿಸಿ ಮಳೆರಾಯ ಅವಾಂತರ ಮಾಡಿತ್ತು. ಇದೀಗ ಮತ್ತೆ ಶುರುವಾಗಿದೆ. ಧಾರಾಕಾರ ಮಳೆಯಾದರೆ ಏರ್ಪೋರ್ಟ್ ರಸ್ತೆಯಲ್ಲಿ ನೀರು ನಿಲ್ಲುವ ಆತಂಕ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮುಂದಿನ ಸುದ್ದಿ
Show comments