ಇನ್ಮುಂದೆ ಕಚೇರಿಗೆ ಹೆಲಿಕಾಪ್ಟರ್ ನಲ್ಲಿ ತೆರಳಿ

Webdunia
ಮಂಗಳವಾರ, 4 ಅಕ್ಟೋಬರ್ 2022 (17:01 IST)

ನಗರದ ಟ್ರಾಫಿಕ್ ಸಮಸ್ಯೆಯಿಂದ ಸಮಯಕ್ಕೆ ಸರಿಯಾಗಿ ಕಚೇರಿ ತಲುಪಲು ಸಾಧ್ಯವಾಗದೆ ಗಂಟೆಗಟ್ಟಲೆ ರಸ್ತೆಯಲ್ಲೇ ಕಾಯಬೇಕಿದ್ದ ಐಟಿ-ಬಿಟಿ ಮಂದಿ ಇನ್ನು ಮುಂದೆ ಕೇವಲ 12 ನಿಮಿಷಗಳಲ್ಲೇ ಕಚೇರಿ ತಲುಪಲು ಈ ಹೆಲಿ ಸೇವೆ ಸಹಕಾರಿಯಾಗಲಿದೆ ಎಂದು ಭಾವಿಸಲಾಗಿದೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಚ್‍ಎಎಲ್ ನಿಲ್ದಾಣಗಳ ನಡುವೆ ಈ ಹೆಲಿ ಸೇವೆ ಜಾರಿಗೆ ತರಲಾಗುತ್ತಿದೆ ಎಂದು ಬ್ಲೇಡ್ ಇಂಡಿಯಾ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ. ನಗರದಲ್ಲಿ ಹೆಲಿ ಸೇವೆ ಎಂಬ ವಿನೂತನ ಪ್ರಯೋಗಕ್ಕೆ ಮುಂದಾಗಿರುವ ಸಂಸ್ಥೆ ಈಗಾಗಲೇ ಎರಡು ಹೆಲಿಕಾಫ್ಟರ್‍ಗಳ ಹಾರಾಟಕ್ಕೆ ಸಿದ್ದತೆ ಮಾಡಿಕೊಂಡಿದೆ.

ನಗರದಲ್ಲಿ ಹೆಲಿ ಸೇವೆ ಆರಂಭಿಸಲು ನಾವು ಸಿದ್ದರಾಗಿದ್ದು ಅ.10ರಿಂದ ಪ್ರಾಯೋಗಿಕವಾಗಿ ಹೆಲಿಕಾಫ್ಟರ್ ಹಾರಾಟ ನಡೆಸುತ್ತಿದ್ದೇವೆ ಎಂದು ಘೋಷಿಸಿದ್ದಾರೆ. ಹೆಚ್‍ಎಎಲ್ ಟು ಏರ್‍ಪೆಪೋರ್ಟ್ ಎಂಬ ಪೈಲೆಟ್ ಪ್ರಾಜೆ ಯೋಜನೆ ಅಡಿಯಲ್ಲಿ ಅಕ್ಟೋಬರ್ 10 ರಿಂದ ಹೆಲಿ ಸೇವೆ ಆರಂಭವಾಗಲಿದ್ದು, ಹೆಚ್‍ಎಎಲ್‍ನಿಂದ ಕೇವಲ 12 ನಿಮಿಷಗಳಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಬಹುದಾಗಿದೆ.

ಕಾರಿನಲ್ಲಿ ಹೆಚ್‍ಎಎಲ್‍ನಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬೇಕಾದರೆ ಸುಮಾರು ಎರಡು ಗಂಟೆಗಳು ಬೇಕಾಗುತ್ತದೆ. ಇಂತಹ ದೂರವನ್ನು ಹೆಲಿಕಾಫ್ಟರ್ ಮೂಲಕ ಕೇವಲ 12 ನಿಮಿಷಗಳಲ್ಲಿ ತಲುಪಲು ಸಾಧ್ಯವಿರುವುದರಿಂದ ಇದು ಸಾವಿರಾರು ಮಂದಿ ಐಟಿ-ಬಿಟಿ ಉದ್ಯೋಗಿಗಳಿಗೆ ವರದಾನವಾಗಲಿದೆ ಎಂದೇ ಭಾವಿಸಲಾಗಿದೆ.

ವಾರದಲ್ಲಿ 5 ದಿನಗಳ ಕಾಳ ಹೆಲಿಕಾಪ್ಟರ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಒಂದು ಹೆಲಿಕಾಫ್ಟರ್‍ನಲ್ಲಿ ಐದು ಮಂದಿ ಒಟ್ಟಿಗೆ ಪ್ರಯಾಣ ಬೆಳೆಸಬಹುದಾಗಿದೆ. ಹೆಲಿಕಾಫ್ಟರ್ ಸೇವೆ ಬಳಸಿಕೊಳ್ಳಲು ಇಚ್ಚಿಸುವವರು 3250 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.15 ರವರೆಗೂ ಎರಡು ಹೆಲಿಕಾಫ್ಟರ್‍ಗಳು ಹಾರಾಟ ನಡೆಸಲಿವೆ.

ಈ ಹೆಲಿ ಸೇವೆಯಿಂದ ಹೆಚ್‍ಎಎಲ್, ಇಂದಿರಾನಗರ, ಕೋರಮಂಗಲ, ಸರ್ಜಾಪುರ , ಮಹದೇವಪುರ ಟಿಕ್ಕಿಗಳಿಗೆ ಭಾರಿ ಅನಕೂಲವಾಗಲಿದೆ. ಬಹುನಿರೀಕ್ಷಿತ ಹೆಲಿ ಸೇವೆಗೆ ಈಗಾಗಲೇ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಅನುಮತಿ ದೊರೆತಿದ್ದು, ಹೆಲಿಕಾಫ್ಟರ್ ಸೇವೆ ಆರಂಭಕ್ಕೆ ದಿನಗಣನೆ ಆರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments