Webdunia - Bharat's app for daily news and videos

Install App

ಇನ್ಮುಂದೆ ಚಾಮುಂಡಿ ಬೆಟ್ಟದಲ್ಲಿ ಈ ವಸ್ತುಗಳಿಗೆ ನಿಷೇಧ

Sampriya
ಮಂಗಳವಾರ, 3 ಸೆಪ್ಟಂಬರ್ 2024 (16:56 IST)
Photo Courtesy X
ಮೈಸೂರು: ಚಾಮುಂಡೇಶ್ವರಿ ದರ್ಶನ್ ಪಡೆದ ಸಿಎಂ ಸಿದ್ದರಾಮಯ್ಯ ಅವರು ಇನ್ಮುಂದೆ ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ಹಾಗೂ ದರ್ಶನದ ವೇಳೆ ಮೊಬೈಲ್​ ನಿಷೇಧಿಸಲಾಗಿದೆ ಎಂದು ಘೋಷಿಸಿದರು.

ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ, ಚಾಮುಂಡೇಶ್ವರಿ ದರ್ಶನ ಪಡೆದರು. ಬಳಿಕ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್​ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡೇಶ್ವರಿ ದರ್ಶನದ ವೇಳೆ ಮೊಬೈಲ್​ ನಿಷೇಧ ಮಾಡಲಾಗಿದೆ ಎಂದರು.

ಚಾಮುಂಡಿ ಬೆಟ್ಟದಲ್ಲಿ ಮಾತ್ರವಲ್ಲದೇ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ. ಸುರಕ್ಷತೆ ದೃಷ್ಟಿಯಿಂದ ಬೆಟ್ಟದಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಕಾವೇರಿ ಜಟಾಪಟಿ ನಡುವೆ ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸೂಚನೆ

ನಿರುದ್ಯೋಗವು ಕಳೆದ 40 ವರ್ಷಗಳಲ್ಲೇ ಗರಿಷ್ಠ ಮಟ್ಟದಲ್ಲಿದೆ: ಪ್ರಿಯಾಂಕ ಗಾಂಧಿ

ಮುಂದಿನ ಸುದ್ದಿ
Show comments