Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹುಬ್ಬಳ್ಳಿ : ಹಿಜಬ್ ವಿವಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸುವಂತೆ ಸೂಚನೆ ಪಾಲಿಸುವಂತೆ ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹಿಜಬ್ ಬಗ್ಗೆ ಇಂದು ಎಲ್ಲಾ ಮಸೀದಿಗಳಲ್ಲಿ ಚರ್ಚೆ ನಡೆಸಿದ ಅಂಜುಮನ್ ಸಂಸ್ಥೆ ಅಧ್ಯಕ್ಷ ಯೂಸೂಫ್ ಸವಣೂರ ಮನವಿ ಮಾಡಿ, ಹೈಕೋರ್ಟ್ ಆದೇಶ ಪಾಲಿಸುವಂತೆ ವಿದ್ಯಾರ್ಥಿಗಳಿಗೆ, ಪಾಲಕರಿಗೆ ಸೂಚನೆ ನೀಡಿದರು.
ಶಾಲೆ, ಕಾಲೇಜ್ಗೆ ಬರುವ ಮುಸ್ಲಿಂ ವಿದ್ಯಾರ್ಥಿನಿಯರು ವಿಶ್ರಾಂತಿ ಕೊಠಡಿಗಳಲ್ಲಿ ಹಿಜಬ್, ಬುರ್ಖಾ ತೆಗೆದಿಟ್ಟು ತರಗತಿಗಳಿಗೆ ಹಾಜರಾಗುವಂತೆ ಸೂಚನೆ ನೀಡಿದೆ.
ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೂ ಮಧ್ಯಂತರ ಆದೇಶ ಪಾಲಿಸಬೇಕು. ಪರೀಕ್ಷೆ ಹತ್ತಿರದಲ್ಲಿ ಇರುವುದರಿಂದ ಮಕ್ಕಳ ಭವಿಷ್ಯ ಮುಖ್ಯವಾಗಿದೆ. ಹೀಗಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡುವಂತೆ ಎಲ್ಲಾ ಪೋಷಕರಿಗೂ ಮನವಿ ಮಾಡಿದರು.