Publish Date: Sat, 29 Jul 2023 (13:57 IST)
Updated Date: Sat, 29 Jul 2023 (14:07 IST)
ಬೆಂಗಳೂರು : ಸಿದ್ದರಾಮಯ್ಯನವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಸಿಎಂಗೆ ನೋಟಿಸ್ ಜಾರಿ ಮಾಡಿದೆ.
ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆಎಂ ಶಂಕರ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಸಿದ್ದರಾಮಯ್ಯನವರಿಗೆ ವಿವರಣೆ ನೀಡುವಂತೆ ಕೋರಿ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿದೆ.