Webdunia - Bharat's app for daily news and videos

Install App

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

Krishnaveni K
ಗುರುವಾರ, 22 ಜನವರಿ 2026 (11:46 IST)
Photo Credit: X
ಬೆಂಗಳೂರು: ಇಂದು ವಿಶೇಷ ಅಧಿವೇಶನಕ್ಕೆ ಮುನ್ನ ಭಾಷಣ ಮಾಡಲು ಬಂದ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಸರ್ಕಾರ ಬರೆದುಕೊಟ್ಟ ಭಾಷಣ ಓದದೇ ತಮ್ಮದೇ ಭಾಷಣ ಮಾಡಿದ್ದು ಹೈಡ್ರಾಮಾಕ್ಕೆ ಕಾರಣವಾಗಿದೆ.

ನಿನ್ನೆಯೇ ಸರ್ಕಾರದ ಬರೆದುಕೊಟ್ಟಿದ್ದ ಭಾಷಣದಲ್ಲಿರುವ ಕೆಲವು ಅಂಶಗಳ ಬಗ್ಗೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಕಷಟು ವಿವಾದದ ಬಳಿಕ ಇಂದು ಕೊನೆಗೂ ರಾಜ್ಯಪಾಲರು ಸದನಕ್ಕೆ ಬಂದಿದ್ದಾರೆ.

ಆದರೆ ಸರ್ಕಾರ ಬರೆದುಕೊಟ್ಟ ಭಾಷಣ ಓದದೇ ಕೇವಲ ಎರಡೇ ನಿಮಿಷದಲ್ಲಿ ತಮ್ಮದೇ ಮಾತನಾಡಿ ನಿರ್ಗಮಿಸಿದ್ದಾರೆ. ಆದರೆ ರಾಜ್ಯಪಾಲರು ತಮ್ಮದೇ ಭಾಷಣ ಮಾಡಿದ್ದಕ್ಕೆ ಕಾಂಗ್ರೆಸ್ ಶಾಸಕರು ಸಿಟ್ಟಾಗಿದ್ದಾರೆ. ಬಿಕೆ ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ತಡೆಯುವ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ತಳ್ಳಾಟ, ನೂಕಾಟದಲ್ಲಿ ಬಿಕೆ ಹರಿಪ್ರಸಾದ್ ಬಟ್ಟೆ ಹರಿದಿದೆ.

ಈ ಗದ್ದಲದ ನಡುವೆ ರಾಜ್ಯಪಾಲರ ರಕ್ಷಣೆಗೆ ಅವರ ಭದ್ರತಾ ಸಿಬ್ಬಂದಿ ಸದನಕ್ಕೆ ನುಗ್ಗಿದ್ದಾರೆ. ಇನ್ನು ರಾಜ್ಯಪಾಲರ ನಡೆ ಖಂಡಿಸಿ ನಮ್ಮ ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇತ್ತ ವಿಪಕ್ಷ ನಾಯಕ ಆರ್ ಅಶೋಕ್, ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರೇ ರಾಜ್ಯಪಾಲರ ಮೇಲೆ ಗೂಂಡಾಗಿರಿ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಯ ಕ್ಯಾಂಟೀನ್ ಪ್ಯಾಟೀಸ್ ಊಟ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ರಾಜ್ಯದಲ್ಲಿ ಗುಟ್ಕಾ, ಪಾನ್ ನಿಷೇಧ ಹಿಂಪಡೆದ ಸರ್ಕಾರ, ಡಿಕೆ ಶಿವಕುಮಾರ್ ಕೊಟ್ಟ ಕಾರಣ ಇಲ್ಲಿದೆ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಬಹುಕೋಟಿ ವಂಚನೆ ಪ್ರಕರಣ, ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಶಿವಾನಂದ ಸಿದ್ದಪ್ಪ ಅರೆಸ್ಟ್

ಅಂದು ಮಹಿಳಾ ನಕ್ಸಲೈಟ್‌ಗಳಾಗಿದ್ದವರ ಕೈಯಲ್ಲಿ ಇಂದು ಕೈಮಗ್ಗ

ಮುಂದಿನ ಸುದ್ದಿ
Show comments