ವಿಸ್ತೃತ ಪೀಠಕ್ಕೆ ಹಿಜಾಬ್‌ ಪ್ರಕರಣ ವರ್ಗಾ

Webdunia
ಗುರುವಾರ, 13 ಅಕ್ಟೋಬರ್ 2022 (15:44 IST)
ಕರ್ನಾಟಕದ ಶಾಲಾ ಕಾಲೇಜುಗಳ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್​ ನಿಷೇಧಿಸಿ ಹೈಕೋರ್ಟ್​ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್​ ಇಂದು ಪ್ರಕಟಿಸಿದೆ. ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಹೊರಬಿದ್ದಿದೆ. ಹೀಗಾಗಿ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರ ಪೀಠಕ್ಕೆ ಪ್ರಕರಣ ವರ್ಗಾವಣೆಯಾಗಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಮೇಲ್ಮನವಿ ಅರ್ಜಿಯ ವಜಾ ಪರ ತೀರ್ಪು ನೀಡಿದ್ದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕರ್ನಾಟಕ ಹೈಕೋರ್ಟ್​ ಆದೇಶವನ್ನು ರದ್ದು ಮಾಡುವ ಪರವಾಗಿ ತೀರ್ಪು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವು ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ UU ಲಲಿತ್ ಅವರ ಮುಂದೆ ಬರಲಿದೆ. ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆಯಾಗಿದೆ. ಅಲ್ಲಿಯವರೆಗೆ ಹಿಜಾಬ್​ ವಿಚಾರದಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ. ನ್ಯಾಯಮೂರ್ತಿಗಳು ತ್ರಿಸದಸ್ಯ ಅಥವಾ ಪಂಚ ಸದಸ್ಯ ಪೀಠ ರಚಿಸುವ ಸಾಧ್ಯತೆಗಳಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ದೆಹಲಿಯಿಂದ ಹೈಕಮಾಂಡ್ ಬುಲಾವ್ ಬಗ್ಗೆ ಕೇಳಿದ್ರೆ ಡಿಕೆ ಶಿವಕುಮಾರ್ ಶಾಕಿಂಗ್ ರಿಯಾಕ್ಷನ್

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಂಡ ಸರ್ಕಾರ: ನೀವೂ ಚೆಕ್ ಮಾಡಿಕೊಳ್ಳಿ

ದೇಶಾದ್ಯಂತ ಮತ್ತೆ ಇಂಧನ ದರ ಭಾರಿ ಏರಿಕೆ: ಸಾರ್ವಜನಿಕರಿಗೆ ಮತ್ತೊಂದು ಬಿಗ್ ಶಾಕ್

Karnataka Weather: ಕರ್ನಾಟಕದ ಮುಂದಿನ ಒಂದು ವಾರದ ಹವಾಮಾನ ವರದಿ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಮುಂದಿನ ಸುದ್ದಿ
Show comments