Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕರ್ನಾಟಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ ವಿವಾದಕ್ಕೆ ಮತ್ತೆ ಮರುಜೀವ ಬಂದಿದೆ. ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಹಿಜಾಬ್ ಧರಿಸುವುದು ಇಸ್ಲಾಂನ ಅಗತ್ಯ ಆಚರಣೆಯ ಅಡಿಯಲ್ಲಿ ಬರುವುದಿಲ್ಲ ಎಂದು ಮಾರ್ಚ್ 15ರಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠದ ಮುಂದೆ ವಕೀಲ ಪ್ರಶಾಂತ್ ಭೂಷಣ್ ಈ ವಿಚಾರವನ್ನು ಪ್ರಸ್ತಾಪಿಸಿದ್ರು. ಮುಂದಿನ ವಾರ ಸೂಕ್ತ ನ್ಯಾಯಪೀಠದ ಮುಂದೆ ಅರ್ಜಿ ವಿಚಾರಣೆ ನಡೆಸಲು ಸಮ್ಮತಿಸಲಾಯ್ತು.