Webdunia - Bharat's app for daily news and videos

Install App

ಹಿಜಾಬ್ ಗಲಾಟೆ ಬೆಂಗಳೂರಿಗೆ ಹಬ್ತಿದೆ

Webdunia
ಭಾನುವಾರ, 13 ಫೆಬ್ರವರಿ 2022 (15:08 IST)
ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ' ಎನ್ನೋ ಮಾತಿಗೆ ಪೂರಕವಾಗುವಂತೆ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಕಾಲೇಜುಗಳಿಂದ ಪ್ರೌಢಶಾಲೆಗಳಿಗೂ ಹಬ್ಬಿಕೊಂಡಿದೆ. ಕರಾವಳಿಯಲ್ಲಿ ಹುಟ್ಟಿಕೊಂಡ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಸದ್ಯ ಸಿಲಿಕಾನ್ ಸಿಟಿಯಲ್ಲೂ ಹರಡಿಕೊಂಡಿದೆ.
ಚಂದ್ರ ಲೇಔಟ್ ವಿದ್ಯಾಸಾಗರ್ ಪಬ್ಲಿಕ್ ಸ್ಕೂಲ್ ಶಿಕ್ಷಕಿಯು ತರಗತಿಯಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಬೋರ್ಡ್ ಮೇಲೆ ಬರೆದಿದ್ದಾರೆಂದು ಪೋಷಕರು ಆರೋಪಿದ್ದಾರೆ. ಸದ್ಯ ಈ ಆರೋಪಕ್ಕೆ ಶಿಕ್ಷಕಿ ಶಶಿಕಲ ಅವರು ಸ್ಪಷ್ಟನೆ ನೀಡಿದ್ದಾರೆ. ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಪಾಠ ಮಾಡುವಾಗ ಮಕ್ಕಳು ಗಲಾಟೆ ಮಾಡುತ್ತಿದ್ದರು. ಮೂರು ಮಕ್ಕಳಿಗೆ ನಾನು ತಿಳಿ ಹೇಳಿದೆ. ಆದರೂ ಆ ಮೂರು ಮಕ್ಕಳು ಗಲಾಟೆ ಮಾಡುತ್ತಲೇ ಇದ್ದರು. ಹೀಗಾಗಿ ಶಿಕ್ಷಕಿ ಗಲಾಟೆ ಮಾಡಿದ ಮಕ್ಕಳನ್ನು ಕಂಟ್ರೋಲ್ ಮಾಡಲು ಅವರ ಹೆಸರಿನ ಮೊದಲನೇ ಹೆಸರನ್ನು ಬರೆಯುತ್ತಾರೆ. ಇದು ಏನು ಎಂಬ ಪ್ರಶ್ನೆ ಮಾಡುತ್ತಾರೆ. ಈ ವೇಳೆ ಶಿಕ್ಷಕಿ ಇದನ್ನು ಏನಾದರು ಅರ್ಥ ಮಾಡಿಕೊಳ್ಳಿ ಎಂದು ಕೋಪದಿಂದ ಹೇಳುತ್ತಾರೆ. ಈ ವೇಳೆ ಮಕ್ಕಳು ತಮ್ಮ ಇದನ್ನು ತಪ್ಪಾಗಿ ಅರ್ಥೈಸಿ ತಮ್ಮ ಮೇಲೆ ಶಿಕ್ಷಕಿ ಕೆಟ್ಟ ಶಬ್ದ ಬಳಕೆ ಮಾಡಿದ್ದಾರೆಂದು ಪೋಷಕರ ಬಳಿ ದೂರು ನೀಡಿದ್ದಾರೆ. ಬಳಿಕ ಪೋಷಕರು ಶಾಲೆಯ ಬಳಿ ಬಂದು ಗಲಾಟೆ ಮಾಡಿದ್ದಾರೆ ಎಂದು ಶಿಕ್ಷಕಿ ಡಿಡಿಪಿಐ ಮುಂದೆ ಹೇಳಿಕೊಂಡಿದ್ದಾರೆ.
ಹಿಜಾಬ್ ಧರಿಸದಂತೆ ವಿದ್ಯಾರ್ಥಿಗಳ ಎದುರು ಬೋರ್ಡ್ ಮೇಲೆ ಬರೆದಿದ್ದಾರೆ ಎಂದು ಆರೋಪಿಸಲಾದ ಶಿಕ್ಷಕಿ ಜೊತೆಗೆ ಶಿಕ್ಷಣಾಧಿಕಾರಿ ಬೈಲಾಂಜನಪ್ಪ ಚರ್ಚೆ ನಡೆಸಿದ್ದಾರೆ. "ಶಿಕ್ಷಕಿ ಶಶಿಕಲಾ ಬಳಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ಶಾಲೆಯಲ್ಲಿ ಪಾಠವನ್ನು ಬಿಟ್ಟು ಬೇರೆ ಯಾವ ವಿಷಯದ ಬಗ್ಗೆ ಪ್ರಸ್ತಾಪಿಸಿಲ್ಲ. ಹಿಜಾಬ್ ವಿವಾದದ ಬಗ್ಗೆ ತರಗತಿಯಲ್ಲಿ ಮಾತನಾಡಿಲ್ಲ ಎಂಬುದಾಗಿ ಶಿಕ್ಷಕಿ ತಿಳಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಲಾಂಜನಪ್ಪ ಸ್ಪಷ್ಟನೆ ನೀಡಿದ್ದಾರೆ. ನಾನು ಇಲ್ಲಿ ಧರ್ಮಕ್ಕೆ ಸಂಬಂಧಿಸಿ ಯಾವುದೇ ಮಾತನ್ನು ಆಡಿಲ್ಲ. ಮಕ್ಕಳ ತಪ್ಪಿ ಗ್ರಹಿಕೆಯಿಂದ ಈ ಗಲಾಟೆ ಮಾಡಿದ್ದಾರೆ ಎಂದು ಶಿಕ್ಷಕಿ ಶಶಿಕಲಾ ಹೇಳಿಕೊಂಡಿದ್ದಾರೆಂದು ತಿಳಿದು ಬಂದಿದೆ.
 
ಬೆಂಗಳೂರು ಚಂದ್ರ ಲೇಔಟ್‌ನಲ್ಲಿರುವ ವಿದ್ಯಾಸಾಗರ್ ಪಬ್ಲಿಕ್ ಶಾಲೆಯಲ್ಲಿ ಹಿಜಾಬ್ ಗಲಾಟೆಗೆ ಕಾರಣರಾದರು ಎಂಬ ಆರೋಪದ ಹಿನ್ನೆಲೆ ಶಿಕ್ಷಕಿ ಶಶಿಕಲಾರನ್ನು ಅಮಾನತುಗೊಳಿಸಲಾಗಿದೆ. ಬೋರ್ಡ್ ಮೇಲೆ ಸಾಂಕೇತಿಕ ಬರಹದ ಬಗ್ಗೆ ವಿದ್ಯಾರ್ಥಿಗಳಲ್ಲಿನ ಗೊಂದಲವೇ ಗಲಾಟೆಗೆ ಕಾರಣವಾಗಿದೆ. ಬೋರ್ಡ್ ಮೇಲೆ ಬರೆದ ಬರಹದ ಬಗ್ಗೆ ವಿದ್ಯಾರ್ಥಿಗಳು ಪೋಷಕರಿಗೆ ತಿಳಿಸಿದ್ದು, ಶುಕ್ರವಾರ ಪೋಷಕರ ಆಕ್ರೋಶಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments