ಹಿಜಾಬ್ ಧರಿಸಿದವರಿಗೆ ಅನುಮತಿ ಇಲ್ಲ

Webdunia
ಬುಧವಾರ, 20 ಏಪ್ರಿಲ್ 2022 (20:50 IST)
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ವೇಳೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮವನ್ನು ಪಾಲನೆ ಮಾಡಬೇಕು. ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇದೀಗ ರಾಜ್ಯದಲ್ಲಿ ಏಪ್ರಿಲ್ 22 ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ಪ್ರಕಟಣೆ ತಿಳಿಸಿದೆ.ಇನ್ನು ಪಿಯುಸಿ ಪರೀಕ್ಷೆ ವೇಳೆಯಲ್ಲಿ ಹಿಜಾಬ್ ವಿವಾದವು ಮರುಕಳಿಸುವ ನಿರೀಕ್ಷೆಯ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸುಗಮವಾಗಿ ಪರೀಕ್ಷೆಗಳನ್ನು ನಡೆಸುವ ಉದ್ದೇಶದಿಂದಾಗಿ ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಚುನಾವಣೆಗೆ ಎಲ್‌ಡಿಎಫ್‌, ಬಿಜೆಪಿ ನಡುವೆ ಒಪ್ಪಂದ: ಪ್ರಿಯಾಂಕಾ ಗಾಂಧಿ

ಕಸ್ಟಡಿಯಲ್ಲಿ ತಂದೆ ಮಗ ಸಾವು, ತಮಿಳುನಾಡಿನ 9ಪೊಲೀಸರಿಗೆ ಮರಣದಂಡನೆ ಶಿಕ್ಷೆ

ದೇಶದ ಅತ್ಯಂತ ಭ್ರಷ್ಟ ಕುಟುಂಬ ಕಾಂಗ್ರೆಸ್‌ನವರು ಇಂದು ಇತರರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ: ಮೋದಿ ಗುಡುಗು

ಸದ್ಯಕ್ಕೆ ಕಚ್ಚಾ ತೈಲದ ಸಮಸ್ಯೆಯಿಲ್ಲ, ಆದರೆ ಆಟೋ ಚಾಲಕರು ಎಲ್‌ಪಿಜಿ ಬದಲು ಪೆಟ್ರೋಲ್ ಬಳಸಿ: ಪ್ರಹ್ಲಾದ್ ಜೋಶಿ

ದೇಶವನ್ನು ಮೋದಿ, ಕೇರಳವನ್ನು ಪಿಣರಾಯಿ ಬಿಟ್ಟು ಮುನ್ನಡೆಸಲು ಬೇರೆಯಾರಿಲ್ಲ ಎಂದು ಭಾವಿಸಿದ್ದಾರೆ: ರಾಹುಲ್ ಕಿಡಿ

ಮುಂದಿನ ಸುದ್ದಿ
Show comments