Webdunia - Bharat's app for daily news and videos

Install App

ಕರ್ನಾಟಕದ ಹಿಂದೂ ದೇವಾಲಯಗಳಲ್ಲಿ ಹಿಂದೂಯೇತರ ಅಧಿಕಾರಿಗಳಿಗೆ ಅವಕಾಶ ನೀಡಲಾಗುತ್ತಿದೆ ಆರೋಪ

Krishnaveni K
ಗುರುವಾರ, 23 ಮೇ 2024 (10:10 IST)
ಬೆಂಗಳೂರು: ಹಿಂದೂ ದೇವಾಲಯಗಳ ಆಡಳಿತ ಮತ್ತು ಆದಾಯದ ಕುರಿತಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ ಹೊಸ  ಕಾನೂನು ತಿದ್ದುಪಡಿಯನ್ನು ಇತ್ತೀಚೆಗೆ ಅಧಿವೇಶನದಲ್ಲಿ ಮಂಡಿಸಿತ್ತು. ಇದಾದ ಬಳಿಕ ದೇವಾಲಯಗಳ ಕುರಿತಾಗಿ ಒಂದೊಂದೇ ವಿವಾದಗಳು ಕೇಳಿಬರುತ್ತಿದೆ.

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಹಿಂದೂ ದೇವಾಲಯಗಳಲ್ಲಿ ಹಿಂದೂ ಸಮುದಾಯದ ಅಧಿಕಾರಿಗಳನ್ನೇ ನೇಮಕ ಮಾಡುವುದು ಈ ಮೊದಲಿನಿಂದಲೂ ನಡೆದುಕೊಂಡ ಬಂದ ಪದ್ಧತಿಯಾಗಿತ್ತು. ಆದರೆ ಇತ್ತೀಚೆಗೆ ಹಿಂದೂಯೇತರ ಅಧಿಕಾರಿಗಳಿಗೂ ಅಧಿಕಾರ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಇತ್ತೀಚೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಯೇಸುರಾಜ್ ಎಂಬವರನ್ನು ಎಇಒ ಆಗಿ ನೇಮಕ ಮಾಡಿತ್ತು ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು. ಕೊನೆಗೆ ಸ್ವತಃ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಯೇಸು ರಾಜ್ ಹಿಂದೂ ಸಮುದಾಯದವರೇ ಎಂದು ಸ್ಪಷ್ಟನೆ ನೀಡಿದ್ದರು. ಆದರೆ ಅವರ ಹೆಸರು ಕೇಳಿದ ಮೇಲೆ ಹಿಂದೂ ಸಮುದಾಯದವರಿಗೆ ಸರ್ಕಾರದ ಸ್ಪಷ್ಟನೆ ತೃಪ್ತಿ ತಂದಿಲ್ಲ.

ಆದರೆ ಸಿದ್ದರಾಮಯ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿದ ಹೊಸ ತಿದ್ದುಪಡಿಯ ಪ್ರಕಾರ ಈಗ ಹಿಂದೂ ದೇವಾಲಯಗಳಿಗೆ ಹಿಂದೂ ಸಮುದಾಯದವರನ್ನೇ ನೇಮಿಸಬಹುದು ಎಂದು ಸ್ಪಷ್ಟವಾಗಿ ಹೇಳಲಾಗಿಲ್ಲ. ಇದು ವಿವಾದಕ್ಕೆ ಕಾರಣವಾಗಿದೆ. ಇದರ ಬಗ್ಗೆ ಹಿಂದೂ ಸಂಘಟನೆಗಳಿಂದ ಆಕ್ರೋಶ ಕೇಳಿಬರುತ್ತಲೇ ಇದೆ.

ಸರ್ಕಾರ ಯಾಕೆ ಯಾವಾಗಲೂ ಹಿಂದೂ ದೇವಾಲಯಗಳನ್ನೇ ಟಾರ್ಗೆಟ್ ಮಾಡುತ್ತಿದೆ. ಮೊದಲೇ ಹಿಂದೂಗಳು ಮತಾಂತರ ಭೀತಿಯಲ್ಲಿದ್ದಾರೆ. ಈ ನಡುವೆ ಹಿಂದೂಯೇತರ ಅಧಿಕಾರಿಗಳನ್ನು ನೇಮಿಸಿದರೆ ಅವರಿಗೆ ನಮ್ಮ ದೇವಾಲಯಗಳ ಸಂಪ್ರದಾಯ, ಪದ್ಧತಿಗಳ ಜ್ಞಾನವೇ ಇರುವುದಿಲ್ಲ. ಅಂತಹವರನ್ನು ನೇಮಿಸುವ ಉದ್ದೇಶವೇನು? ನಮ್ಮ ದೇವಾಲಯಗಳಿಗೆ ನಮ್ಮದೇ ಸಮುದಾಯದ ಅಧಿಕಾರಿಗಳು ಸಿಗುವುದಿಲ್ಲವೇ ಎಂದು ಹಿಂದೂ ಸಂಘಟನೆಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments