Webdunia - Bharat's app for daily news and videos

Install App

ಸಿಖ್ಖರಿಗೆ ಭಯವಿದೆ ಅಂತೀರಲ್ಲ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಹಿಂದೂಗಳಿಗೆ ಭಯವಿದೆ ಎಂದ ನೆಟ್ಟಿಗರು

Krishnaveni K
ಶನಿವಾರ, 14 ಸೆಪ್ಟಂಬರ್ 2024 (14:00 IST)
Photo Credit: X
ಬೆಂಗಳೂರು: ಹಿಂದೂಗಳ ಆರಾಧ್ಯ ದೈವ ಗಣೇಶನ ಮೂರ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿ ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ಯುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

ಮಂಡ್ಯದ ನಾಗಮಂಗಲದಲ್ಲಿ ನಡೆದ ಕೋಮುಗಲಭೆಯಲ್ಲಿ ಗಣೇಶನ ಮೂರ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೊದಲು ಸುದ್ದಿಯಾಗಿತ್ತು. ಆದರೆ ಇದು ಮಂಡ್ಯದ ಗಣೇಶನ ಮೂರ್ತಿಯಲ್ಲ. ಬೆಂಗಳೂರಿನಲ್ಲಿ ಗಣೇಶನ ಮೂರ್ತಿಯನ್ನಿಟ್ಟುಕೊಂಡು ಹಿಂದೂಗಳು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಮೂರ್ತಿಯನ್ನೇ ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದೊಯ್ದಿದ್ದರು.

ಈ ಫೋಟೋಗಳನ್ನು ನೋಡಿ ನೆಟ್ಟಿಗರು ಇದು ಬೆಂಗಳೂರಾ, ಬಾಂಗ್ಲಾದೇಶವಾ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಜೊತೆಗೆ ರಾಹುಲ್ ಗಾಂಧಿಯವರು ಅಮೆರಿಕಾದಲ್ಲಿ ಭಾಷಣ ಮಾಡುವಾಗ ಭಾರತದಲ್ಲಿ ಈಗ ಸಿಖ್ಖರು ಪೇಟ, ಕಡಗ ತೊಟ್ಟುಕೊಂಡು ಹೋಗಲೂ ಭಯಪಡುವ ಸ್ಥಿತಿಯಿದೆ ಎಂದಿದ್ದರು.

ಆದರೆ ಕರ್ನಾಟಕದಲ್ಲಿ ಹಿಂದೂಗಳೇ ಗಣೇಶನ ಮೂರ್ತಿಯನ್ನು ಇಡಲು ಭಯಪಡುವ ಸ್ಥಿತಿಯಾಗಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಆದರೆ ಗಣೇಶನ ಮೂರ್ತಿಯನ್ನೇ ಪೊಲೀಸರು ಅರೆಸ್ಟ್ ಮಾಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ನಡುವೆ ಗಲಭೆಪೀಡಿತವಾಗಿದ್ದ ನಾಗಮಂಗಲದಲ್ಲಿ ಇದೀಗ ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments