Webdunia - Bharat's app for daily news and videos

Install App

ಮುಸ್ಲಿಮರ ಹೆಸರು ಬಂತು ಎಂದ ತಕ್ಷಣ ಬಿಜೆಪಿಯವರಿಗೆ ಅದೇ ಕೆಲಸ: ಗೃಹಸಚಿವ ಪರಮೇಶ್ವರ್

Krishnaveni K
ಮಂಗಳವಾರ, 11 ಫೆಬ್ರವರಿ 2025 (13:42 IST)
ಬೆಂಗಳೂರು: ಮುಸ್ಲಿಮರ ಹೆಸರು ಬಂತು ಎಂದ ತಕ್ಷಣ ಬಿಜೆಪಿಯವರಿಗೆ ರಾಜಕೀಯ ಮಾಡುವುದೇ ಕೆಲಸ ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

ಮೈಸೂರಿನಲ್ಲಿ ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ರೊಚ್ಚಿಗೆದ್ದ ಮುಸ್ಲಿಂ ಯುವಕರ ಗುಂಪು ಪೊಲೀಸ್ ಠಾಣೆಗೆ ಕಲ್ಲೆಸೆದು ದಾಂಧಲೆ ನಡೆಸಿದ್ದಾರೆ. ಇದರ ಬಗ್ಗೆ ಇಂದು ವಿಪಕ್ಷ ನಾಯಕ ಆರ್ ಅಶೋಕ್ ಇದೂ ಕೂಡಾ ಕಾಂಗ್ರೆಸ್ ನ ತುಷ್ಠೀಕರಣದ ಫಲ ಎಂದು ಟೀಕಿಸಿದ್ದರು. ಮುಸಲ್ಮಾನರನ್ನು ಓಲೈಸುವುದಕ್ಕೇ ಈ ರೀತಿ ಘಟನೆಗಳು ಪದೇ ಪದೇ ಆಗುತ್ತಿದೆ ಎಂದಿದ್ದರು.

ಈ ಬಗ್ಗೆ ಇಂದು ಗೃಹಸಚಿವ ಜಿ ಪರಮೇಶ್ವರ್ ಗೆ ಮಾಧ್ಯಮಗಳು ಪ್ರಶ್ನೆ ಮಾಡಿವೆ. ಇದಕ್ಕೆ ಪ್ರತಿಕ್ರಿಯಿಸಿದ ಅವರು ಬಿಜೆಪಿಯವರಿಗೆ ಬೇರೆ ಏನು ಕೆಲಸ ಇದೆ. ಮುಸಲ್ಮಾನರ ಹೆಸರು ಬಂತು ಎಂದ ತಕ್ಷಣ ತುಷ್ಠೀಕರಣ ಎಂದು ಬೇಳೆ ಬೇಯಿಸಿಕೊಳ್ಳುತ್ತಾರೆ. ಅವರಿಗೆ ಅದೇ ಅಲ್ವಾ ಅಜೆಂಡಾ ಎಂದಿದ್ದಾರೆ.

ಇನ್ನು ಮೈಸೂರು ಗಲಭೆ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹಸಚಿವರು ಹೇಳಿದ್ದಾರೆ. ಘಟನೆಗೆ ಕಾರಣರಾದವರು ಮತ್ತು ಕಲ್ಲು ತೂರಾಟ ನಡೆಸಿದವರ ವಿರುದ್ಧವೂ ಕ್ರಮವಾಗಲಿದೆ. ಒಂದು ವೇಳೆ ಪೊಲೀಸರು ತಪ್ಪು ಮಾಡಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments