Webdunia - Bharat's app for daily news and videos

Install App

ವಿಕ್ರಂ ಗೌಡ ಎನ್‌ಕೌಂಟರ್ ಬಗ್ಗೆ ಗೃಹಸಚಿವ ಪರಮೇಶ್ವರ್‌ ಫಸ್ಟ್‌ ರಿಯ್ಯಾಕ್ಷನ್

Sampriya
ಮಂಗಳವಾರ, 19 ನವೆಂಬರ್ 2024 (15:54 IST)
Photo Courtesy X
ಬೆಂಗಳೂರು: ಕೇರಳ, ತಮಿಳುನಾಡು ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ಸಂಬಂಧ  ಗೃಹ ಸಚಿವ ಪರಮೇಶ್ವರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಅನೇಕ ಪ್ರಕರಣಗಳಲ್ಲಿ ಕಳೆದ 20 ವರ್ಷಗಳಿಂದ ನಕ್ಸಲ್ ನಾಯಕ ವಿಕ್ರಂ ಗೌಡ ತಲೆಮರೆಸಿಕೊಂಡಿದ್ದ. ಆತನನ್ನು ಸೆರೆಹಿಡಿಯಲು ಸಾಧ್ಯವಾಗಿರಲಿಲ್ಲ. ಆತನ ಚಲನವಲನಗಳ ಬಗ್ಗೆ ಪೊಲೀಸರು ನಿಗಾ ಇಟ್ಟಿದ್ದರು. ಕಳೆದ ವಾರ ಲತಾ ಮತ್ತು ರಾಜು ಎಂಬ ಇಬ್ಬರು ನಕ್ಸಲರ ಸುಳಿವು ಸಿಕ್ಕಿದ್ದು, ಈ ವೇಳೆ ವಿಕ್ರಮ್‌ ಗೌಡ ಇರುವ ಮಾಹಿತಿ ಪೊಲೀಸರಿಗೆ ಲಭಿಸಿದೆ ಎಂದರು.

ಮಾಹಿತಿ ಆಧರಿಸಿ ಹೆಬ್ರಿಯಲ್ಲಿ ಕೊಂಬಿಂಗ್ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ನಕ್ಸಲರ ಗುಂಪು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿತು. ನಕ್ಸಲ್ ಹಾಗೂ ಪೊಲೀಸರ ನಡುವಿನ ಗುಂಡಿನ ದಾಳಿಯಲ್ಲಿ ವಿಕ್ರಂ ಗೌಡ ಹತ್ಯೆಯಾಗಿದ್ದಾನೆಂದು ಸ್ಪಷ್ಟಪಡಿಸಿದರು.

ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್‌ ನಾಯಕ ವಿಕ್ರಮ್‌ ಗೌಡ ಹತನಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments