Webdunia - Bharat's app for daily news and videos

Install App

ಆಪರೇಷನ್ ಆಡಿಯೋ ಪ್ರಕರಣ ಗಂಭೀರ ಎಂದ ಗೃಹ ಸಚಿವ

Webdunia
ಶನಿವಾರ, 23 ಫೆಬ್ರವರಿ 2019 (17:04 IST)
ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿ ಎಸ್.ಐ.ಟಿ ತನಿಖಾ ತಂಡ ರಚನೆ ಒಂದಷ್ಟು ವಿಳಂಬವಾಗುತ್ತಿದೆ. ಹಾಗೆಂದು ಸರ್ಕಾರ ಪ್ರಕರಣವನ್ನು ಹಗುರವಾಗಿ ಪರಿಗಣಿದೆ ಎಂದರ್ಥವಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಕಲಬುರ್ಗಿಗೆ ಆಗಮಿಸಿದ ಸಂದರ್ಭ ಮಾತನಾಡಿದ ಅವರು, ತನಿಖೆಗೆ ಸೂಕ್ತ ತಂಡವನ್ನು ಸಿದ್ಧತೆ ಮಾಡುತ್ತಿದೆ. ಎಸ್.ಐ.ಟಿ. ತನಿಖೆಗೆ ಮುಖ್ಯಮಂತ್ರಿ ನಿರಾಸಕ್ತಿ ಎಂಬ ವಿಚಾರ ಆಧಾರ ರಹಿತವಾದದ್ದು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಒಪ್ಪಿ ಎಸ್.ಐ.ಟಿ. ತನಿಖೆಗೆ ಆದೇಶಿಸಿದ್ದಾರೆ. ಎಸ್.ಐ.ಟಿ.ಗೆ. ಸಿಎಂ ವಿರೋಧ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದರು. ಅಪರೇಷನ್ ಆಡಿಯೋ ಘಟನೆಗೆ ಸಂಬಂಧಿಸಿ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣದ ತನಿಖೆಗೆ ಕಲಬುರ್ಗಿ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆಯಜ್ಞೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ, ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿರುವುದಕ್ಕೂ ಎಸ್.ಐ.ಟಿ. ತನಿಖೆಗೂ ಸಂಬಂಧವಿಲ್ಲ. ಎಸ್.ಐ.ಟಿ. ತನಿಖೆಯೇ ಬೇರೆಯಾಗಿದೆ. ಶೀಘ್ರವೇ ಎಸ್.ಐ.ಟಿ. ತನಿಖೆ ಪ್ರಾರಂಭಗೊಳ್ಳಲಿದೆ ಎಂದರು. ಯಡಿಯೂರಪ್ಪ ಅವರು ಅಪರೇಷನ್ ಆಡಿಯೋದಲ್ಲಿರುವ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡಿದ್ದಾರೆ.

ಅಲ್ಲದೆ ಹೈಕೋರ್ಟ್ ನಲ್ಲಿ ಅವರ ಪರ ವಕೀಲರು 10 ಕೋಟಿ ರೂಪಾಯಿ ಲಂಚವಲ್ಲ, ಚುನಾವಣೆ ಖರ್ಚಿಗಾಗಿ ಎಂದು ಹೇಳಿದ್ದಾರೆ. ಚುನಾವಣಾ ಆಯೋಗ ವಿಧಾನಸಭೆ ಚುನಾವಣೆಗೆ 25 ವೆಚ್ಚದ ಮಿತಿ ಹಾಕಿದೆ. ಹೀಗಿರಬೇಕಾದರೆ 10 ಕೋಟಿ ರೂಪಾಯಿ ಚುನಾವಣಾ ವೆಚ್ಚಕ್ಕಾಗಿ ಮುಂಗಡವಾಗಿ ಕೊಡುತ್ತಾರೆ ಎಂದರೆ ಅದರರ್ಥ ಉಳಿದ 9.75 ಕೋಟಿ ರೂಪಾಯಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಒಡ್ಡಿದ ಆಮಿಷದ ಹಣ ಎಂದು ಪಾಟೀಲ ಅಭಿಪ್ರಾಯಪಟ್ಟರು. ನ್ಯಾಯಾಲಯದ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಮುಂದಿನ ದಿನಗಳಲ್ಲಿ ಅದರ ವಿಚಾರಣೆ ನಡೆಸಲಿದೆ ಎಂದರು. 



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments