Webdunia - Bharat's app for daily news and videos

Install App

ಹನಿಟ್ರ್ಯಾಪ್‌, ಪರಮೇಶ್ವರ್‌ ಭೇಟಿಯಾಗಿ ದೂರು ಸಲ್ಲಿಸುತ್ತೇನೆ: ಕೆಎನ್‌ ರಾಜಣ್ಣ

Sampriya
ಮಂಗಳವಾರ, 25 ಮಾರ್ಚ್ 2025 (16:23 IST)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಎಬ್ಬಿಸಿರುವ ಹನಿಟ್ರ್ಯಾಪ್ ಸಂಬಂಧ ಇಂದು ಸಂಜೆ 4.30ಕ್ಕೆ ಗೃಹ ಸಚಿವ ಜಿ. ಪರಮೇಶ್ವರ ಅವರನ್ನು ಭೇಟಿಮಾಡಿ ದೂರು ಸಲ್ಲಿಸುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.

ದೂರಿನ ಪ್ರತಿಯೊಂದಿಗೆ ಬೆಂಗಳೂರಿಗೆ ಬರುತ್ತಿರುವ ಅವರು ಪರಮೇಶ್ವರ ಅವರು ನೆಲಮಂಗಲದ ಸಮೀಪದ ಟಿ. ಬೇಗೂರಿನಲ್ಲಿರುವ ವಿಷಯ ತಿಳಿದು ಮಂಗಳವಾರ ಮಧ್ಯಾಹ್ನ ಅಲ್ಲಿಯೇ ಗೃಹ ಸಚಿವರನ್ನು ಭೇಟಿಮಾಡಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.

ಪರಮೇಶ್ವರ್ ಅವರು ತಮ್ಮ ಮನೆಗೆ ಬಂದು ಭೇಟಿ ಮಾಡುವಂತೆ ಸೂಚಿಸಿದ್ದು, ಅಲ್ಲಿಗೆ ಹೋಗಿ ದೂರು ನೀಡುವೆ ಎಂದು ರಾಜಣ್ಣ ತಿಳಿಸಿದರು.

ದೂರು ಸಲ್ಲಿಸಿದ ಬಳಿಕ ಅದರ ಪ್ರತಿಯನ್ನು ಮಾಧ್ಯಮಗಳಿಗೂ ನೀಡುವೆ. ತನಿಖೆಯ ವಿಚಾರದಲ್ಲಿ ಗೃಹ ಸಚಿವರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಎರಡು ದಿನ ಕಾದು ನೋಡುವೆ ಎಂದರು.

ಹನಿಟ್ರ್ಯಾಪ್ ಯತ್ನದ ಹಿಂದೆ ಇರುವವರು ಯಾರು ಎಂಬುದನ್ನು ಈಗಲೇ ಹೇಳುವುದು ಕಷ್ಟ. ಆ ವ್ಯಕ್ತಿಗಳನ್ನು ಪತ್ತೆ ಹಚ್ಚುವುದಕ್ಕಾಗಿ ತನಿಖೆಯ ಅಗತ್ಯವಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments