Webdunia - Bharat's app for daily news and videos

Install App

ಕುಂಭಮೇಳದಿಂದ ವಾಪಾಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ: ಗೋಕಾಕ್‌ನ 6ಮಂದಿ ದುರ್ಮರಣ

Sampriya
ಸೋಮವಾರ, 24 ಫೆಬ್ರವರಿ 2025 (15:16 IST)
Photo Courtesy X
ಮಧ್ಯಪ್ರದೇಶ: ಜಬಲ್‌ಪುರ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಪ್ರಯಾಗ್‌ರಾಜ್‌ನ ಮಹಾಕುಂಭದಿಂದ ಹಿಂದಿರುಗುತ್ತಿದ್ದ ವೇಳೆ ವೇಗವಾಗಿ ಬಂದ ಜೀಪ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರು ಕರ್ನಾಟಕದ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನವರು ಎಂದು ತಿಳಿದುಬಂದಿದೆ..

ಫೆಬ್ರವರಿ 18 ರಂದು ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಕ್ಕಾಗಿ ಅವರು ಗೋಕಾಕ್‌ನಿಂದ ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕ ನೋಂದಾಯಿತ ಜೀಪ್ ಪ್ರಯಾಗರಾಜ್‌ನಿಂದ ಹಿಂತಿರುಗುತ್ತಿದ್ದಾಗ ಖಿತೌಲಾ ಪೊಲೀಸ್ ಠಾಣೆ ವ್ಯಾಪ್ತಿಯ ಪಹ್ರೆವಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಜಬಲ್‌ಪುರ ಕಲೆಕ್ಟರ್ ದೀಪಕ್ ಸಕ್ಸೇನಾ ತಿಳಿಸಿದ್ದಾರೆ.

ಜೀಪ್ ಚಾಲಕ ನಿಯಂತ್ರಣ ಕಳೆದುಕೊಂಡು ಮೊದಲು ರಸ್ತೆ ವಿಭಜಕದಲ್ಲಿ ಮರಕ್ಕೆ ಡಿಕ್ಕಿ ಹೊಡೆದು, ನಂತರ ಹೆದ್ದಾರಿಯ ಇನ್ನೊಂದು ಬದಿಗೆ ಹಾರಿ ಎದುರು ದಿಕ್ಕಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತಕ್ಕೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದು, ಅವರನ್ನು ಸಿಹೋರಾ ಪಟ್ಟಣದ ವೈದ್ಯಕೀಯ ಸೌಲಭ್ಯದಲ್ಲಿ ಪ್ರಾಥಮಿಕ ಚಿಕಿತ್ಸೆಯ ನಂತರ ಜಬಲ್‌ಪುರ ವೈದ್ಯಕೀಯ ಕಾಲೇಜಿಗೆ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತರು ಪ್ರಯಾಗ್‌ರಾಜ್‌ನಿಂದ ಹಿಂತಿರುಗಿ ಜಬಲ್‌ಪುರ ಮೂಲಕ ಕರ್ನಾಟಕದ ಕಡೆಗೆ ಹೋಗುತ್ತಿದ್ದರು ಎಂದು ಅವರು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments