Webdunia - Bharat's app for daily news and videos

Install App

ಹೊಸಕೋಟೆ ಶಾಸಕರ ಸಿಲ್ಲಿ ಪಾಲಿಟಿಕ್ಸ್

Webdunia
ಗುರುವಾರ, 10 ಫೆಬ್ರವರಿ 2022 (19:24 IST)
ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆಗೆ ಟೇಪ್ ಕಟ್ ಮಾಡುವ ವಿಚಾರದಲ್ಲಿ ಇಬ್ಬರು ಜನ ಪ್ರತಿನಿಧಿಗಳು ಸಾರ್ವಜನಿಕರ ಮುಂದೆಯೇ ಕಿತ್ತಾಡಿಕೊಂಡಿದ್ದಾರೆ. ಏಕವಚನದಲ್ಲೇ ಬೈದಾಡಿಕೊಂಡ ಈ ಇಬ್ಬರು ನಾಯಕರಿಗೆ ಲೋಕಲ್ ಪಾಲಿಟಿಕ್ಸ್ ನಲ್ಲಿ ಇದು ಹೊಸದೇನಲ್ಲ.
ಟೇಪ್ ಕಟ್ ಮಾಡಲು ತಂದಿದ್ದ ಕತ್ತರಿಯನ್ನು ಮೊದಲು ಎತ್ತಿಕೊಂಡು ಶರತ್ ಟೇಪ್ ಕಟ್ ಮಾಡಲು ಮುಂದಾಗಿದ್ದಾರೆ. "ಸಚಿವರು ಅನ್ನುವ ಮರ್ಯಾದೆ ಬೇಡ್ವೇನಯ್ಯಾ, ಇದೇ ಆಗೋಯಿತು ನಿಂದು"ಎಂದು ಸಾರ್ವಜನಿಕರ ಸಮ್ಮುಖದಲ್ಲೇ ಎಂ.ಟಿ.ಬಿ ನಾಗರಾಜ್ ಬೇಸರ ವ್ಯಕ್ತ ಪಡಿಸಿದ್ದಾರೆ. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಶರತ್ ಬಚ್ಚೇಗೌಡ ಟೇಪ್ ಕಟ್ ಮಾಡಿ, ಕಟ್ಟಡದ ಒಳಗೆ ಹೋಗಿದ್ದಾರೆ.
 
ಇಬ್ಬರೂ ವೇದಿಕೆಗೆ ಹೋಗುವ ಜಾಗದಲ್ಲಿ, "ಅಪ್ಪಮಕ್ಕಳದ್ದು ಇದೇ ಆಗೋಯಿತು, ಬಚ್ಚೇಗೌಡ್ರ ಹಸ್ತಕ್ಷೇಪ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ"ಎಂದು ಎಂಟಿಬಿಯವರು, ಶರತ್ ಅವರಿಗೆ ಕೈತೋರಿಸಿ ಮಾತನಾಡಿದ್ದಾರೆ. ಇದಕ್ಕೆ ಶರತ್ ಬಚ್ಚೇಗೌಡ ಏರುಧ್ವನಿಯಲ್ಲಿ ತಿರುಗೇಟು ನೀಡಿದ್ದಾರೆ.
 
"ಕೈತೋರಿಸಿ ಮಾತನಾಡಬೇಡಿ, ಮರ್ಯಾದೆ ಕೊಟ್ಟು ಮಾತನಾಡಿ, ನನ್ನ ಬಗ್ಗೆ ಬೇಕಾದರೆ ಮಾತನಾಡಿ, ನನ್ನ ತಂದೆ ಬಚ್ಚೇಗೌಡ್ರ ವಿಚಾರವನ್ನು ಯಾಕೆ ಪ್ರಸ್ತಾವಿಸುತ್ತೀರಾ, ಅವರೇನು ಮಾಡಿದ್ದಾರೆ"ಎಂದು ಶರತ್ ಬಚ್ಚೇಗೌಡ ಆಕ್ರೋಶ ಹೊರಹಾಕಿದ್ದಾರೆ. ಆಗ ಅಲ್ಲಿದ್ದ ಎರಡೂ ನಾಯಕರ ಹಿಂಬಾಲಕರು ಇಬ್ಬರನ್ನೂ ಸಮಾಧಾನ ಪಡಿಸಿದ್ದಾರೆ. ಅಲ್ಲಿಗೂ ಮುಗಿಯಲಿಲ್ಲ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments