Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹಾಸನ ಜಿಲ್ಲೆಯಲ್ಲಿ ವರುಣನ ಅ್ಬರ ಮುಂದುವರೆದಿದೆ.. ನಿನ್ನೆ ರಾತ್ರಿ ಸುರಿದ ಗಾಳಿ ಮಳೆಗೆ ವಾಸವಿದ್ದ ಮನೆ ಕುಸಿದು ಬಿದ್ದಿದೆ..ಅರಕಲಗೂಡು ತಾಲ್ಲೂಕಿನ ಹೆಬ್ಬಾಲೆ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ..ಗ್ರಾಮದ ಸುರೇಶ್ ಎಂಬುವರಿಗೆ ಸೇರಿದ ಮನೆ ಕುಸಿದು ಅಪಾರ ಪ್ರಮಾಣದ ನಷ್ಟ ಅನುಭವಿಸುವಂತಾಗಿದೆ..ಇದೊಂದೇ ಮನೆಯಲ್ಲದೇ ಭಾರಿ ಮಳೆಯಿಂದಾಗಿ ಜಿಲ್ಲೆಯ ಬಹುತೇಕ ಮನೆಗಳು ಕುಸಿಯುವ ಹಂತದಲ್ಲಿವೆ..ಇನ್ನು ಮನೆ ಕುಸಿದ ಸ್ಥಳಕ್ಕೆ ಹೆಬ್ಬಾಲೆ ಗ್ರಾಮಪಂಚಾಯ್ತಿ ಅಧ್ಯಕ್ಷೆ ನೇತ್ರಾವತಿ ಹರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು..ಜೊತೆಗೆ ಸೂಕ್ತ ಪರಿಹಾರದ ಜೊತೆಗೆ ಮನೆ ನಿರ್ಮಿಸಿಕೊಡಲು ಕ್ರಮದ ಭರವಸೆ ನೀಡಿದ್ರು.