Webdunia - Bharat's app for daily news and videos

Install App

ಹಿರಿಯರಿಗೆ Ayushman Card ಗೆ ಇಂದಿನಿಂದಲೇ ನೋಂದಣಿ ಶುರು, ಮಾಡುವ ವಿಧಾನ ಹೀಗೆ

Krishnaveni K
ಮಂಗಳವಾರ, 1 ಅಕ್ಟೋಬರ್ 2024 (15:28 IST)
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ಯೋಜನೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೂ ವಿಸ್ತರಿಸಿದೆ. ಇಂದಿನಿಂದ ಹಿರಿಯ ನಾಗರಿಕರು ಆಯುಷ್ಮಾನ್ ಭಾರತ್ ಕಾರ್ಡ್ ಗೆ ನೋಂದಣಿ ಮಾಡಬಹುದು. ಹೇಗೆ ಎಂಬ ವಿವರ ಇಲ್ಲಿದೆ.

ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಯೋಜನೆಯನ್ನು ಈಗ 70 ವರ್ಷ ಮೇಲ್ಪಟ್ಟ ವಯೋವೃದ್ಧರಿಗೂ ವಿಸ್ತರಿಸಲಾಗಿದೆ. ಈ ಯೋಜನೆಯಡಿಯಲ್ಲಿ 5 ಲಕ್ಷ ರೂ.ವರೆಗಿನ ಚಿಕಿತ್ಸಾ ವೆಚ್ಚ ಉಚಿತವಾಗಿ ಸಿಗಲಿದೆ. ಹೃದಯ ಶಸ್ತ್ರಚಿಕಿತ್ಸೆ, ಕ್ಯಾನ್ಸರ್ ಟ್ರೀಟ್ ಮೆಂಟ್ ನಂತಹ ಮಾರಕ ರೋಗಗಳಿಂದ ಹಿಡಿದು 1,500 ಕ್ಕೂ ಹೆಚ್ಚು ವಿವಿಧ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಇದರಿಂದ ಭರಿಸಬಹುದಾಗಿದೆ.

ಈ ಯೋಜನೆಯಡಿ ವಯಸ್ಸಾದವರು, ಆರ್ಥಿಕವಾಗಿ ದುರ್ಬಲರಾದವರಿಗೆ ವೈದ್ಯಕೀಯ ಚಿಕಿತ್ಸಾ ವೆಚ್ಚದ ಹೊರೆ ತಗ್ಗಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಈಗಾಗಲೇ ಆಯುಷ್ಮಾನ್ ಭಾರತ್ ಯೋಜನೆಯಡಿ 34 ಕೋಟಿ ಕಾರ್ಡ್ ಗಳನ್ನು ವಿತರಿಸಲಾಗಿದೆ. ಇದೀಗ 6 ಕೋಟಿ ಕಾರ್ಡ್ ವಿತರಿಸುವ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ.

ಈ ಯೋಜನೆಯ ಫಲಾನುಭವಿಗಳು ದೇಶದಾದ್ಯಂತ ಪಟ್ಟಿ ಮಾಡಲಾದ 29,000 ಕ್ಕೂ ಅಧಿಕ ಆಸ್ಪತ್ರೆಗಳಲ್ಲಿ ನಗದುರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದಾಗಿದೆ.

ಆಯುಷ್ಮಾನ್ ಕಾರ್ಡ್ ಗೆ ನೊಂದಾಯಿಸುವುದು ಹೇಗೆ?
https://beneficiary.nha.gov.in ಎಂಬ ವೆಬ್ ಸೈಟ್ ಗೆ ಭೇಟಿ ನೀಡಿದ ಆನ್ ಲೈನ್ ಮುಖಾಂತರ ನೊಂದಾಯಿಸಬಹುದು.
ಕಸ್ಟಮರ್ ಲಾಗಿನ್ ಮಾಡಲು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು.
ನಿಮ್ಮ ಫೋನ್ ಗೆ ಒಟಿಪಿ ಬರುತ್ತದೆ, ಅದನ್ನು ನಮೂದಿಸಬೇಕು
ಬಳಿಕ ನಿಮ್ಮ ಹೆಸರು, ಆಧಾರ್ ಸಂಖ್ಯೆ ಅಥವಾ ಪಡಿತರ ಚೀಟಿ ಬಳಸಿಕೊಂಡು ಅರ್ಹತೆಯನ್ನು ಪರಿಶೀಲಿಸಬಹುದು.
ಅರ್ಹತೆ ಇದ್ದರೆ ಆಧಾರ್ ಇ-ಕೆವೈಸಿ ಜೊತೆಗೆ ವಿವರಗಳನ್ನು ಪರಿಶೀಲಿಸಿ.
ಎಲ್ಲಾ ವಿವರಗಳನ್ನು ಭರ್ತಿ ಮಾಡಿದ ನಂತರ ಇತ್ತೀಚೆಗಿನ ಫೋಟೋವನ್ನು ಅಪ್ ಲೋಡ್ ಮಾಡಿ. ನಂತರ, ನಿಮ್ಮ ಆಯುಷ್ಮಾನ್ ಭಾರತ್ ಕಾರ್ಡ್ ನ್ನು ಡೌನ್ ಲೋಡ್ ಮಾಡಿ.

ಬೇಕಾಗುವ ದಾಖಲೆಗಳು
ಆಧಾರ್ ಕಾರ್ಡ್
ನಿವಾಸದ ಪುರಾವೆ
ಇತ್ತೀಚೆಗಿನ ಭಾವಚಿತ್ರ
ನೋಂದಣಿ ಮಾಡಿದವರ ಅರ್ಹತೆಗನುಗುಣವಾಗಿ ಕಾರ್ಡ್ ವಿತರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments