Webdunia - Bharat's app for daily news and videos

Install App

ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ತಿದ್ದಲು ಇಂದಿನಿಂದಲೇ ಅವಕಾಶ: ಸರಿಪಡಿಸುವುದು ಹೇಗೆ ಇಲ್ಲಿದೆ ಡೀಟೈಲ್ಸ್

Krishnaveni K
ಸೋಮವಾರ, 25 ನವೆಂಬರ್ 2024 (10:38 IST)
ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದ್ದರಿಂದ ಹಲವರು ಅರ್ಹರೂ ಬಿಪಿಎಲ್ ಕಾರ್ಡ್ ಕಳೆದುಕೊಂಡಿದ್ದಾರೆ. ಇದೀಗ ಆ ಎಡವಟ್ಟು ಸರಿಪಡಿಸಲು ಸರ್ಕಾರ ಮುಂದಾಗಿದ್ದು ಇಂದಿನಿಂದ ಆ ಕೆಲಸ ಶುರುವಾಗಲಿದೆ.

 
ಇಂದಿನಿಂದ ರದ್ದಾಗಿರುವ ಬಿಪಿಎಲ್ ಕಾರ್ಡ್ ಮರುಪರಿಶೀಲಿಸಿ ಅನರ್ಹರಿಗೆ ಕತ್ತರಿ ಹಾಕಿ, ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್ ವಿತರಿಸಲಾಗುತ್ತದೆ. ಮುಖ್ಯಮಂತ್ರಿಗಳ ಸೂಚನೆ ಬೆನ್ನಲ್ಲೇ ಆಹಾರ ಇಲಾಖೆ ರದ್ದಾಗಿರುವ ಅರ್ಹರಿಗೆ ಮತ್ತೆ ವಿತರಿಸಲು ಮುಂದಾಗಿದೆ.

ತಿದ್ದುಪಡಿ ಮಾಡುವುದು ಎಲ್ಲಿ?
ಒಂದು ವೇಳೆ ನೀವು ಅರ್ಹರಾಗಿದ್ದೂ ಬಿಪಿಎಲ್ ಕಾರ್ಡ್ ರದ್ದಾಗಿದ್ದಲ್ಲಿ ಸಮೀಪದ ಆಹಾರ ಇಲಾಖೆ ಕೇಂದ್ರಕ್ಕೆ ತೆರಳಿ ಸರಿಪಡಿಸಬೇಕು. ಬೆಂಗಳೂರಿನಲ್ಲಿ ಪೂರ್ವ ವಲಯದವರಿಗೆ ರಾಜಾಜಿನಗರ, ಪಶ್ಚಿಮ ವಲಯಕ್ಕೆ ಬಸವನಗುಡಿ, ಉತ್ತರ ವಲಯ ಮೆಜೆಸ್ಟಿಕ್, ಕೆಂಗೇರಿ ಮತ್ತು ಬನಶಂಕರಿ, ಆರ್ ಟಿ ನಗರ ಆಹಾರ ಇಲಾಖೆ ಕಚೇರಿ,ವಯ್ಯಾಲಿಕಾವಲ್ ಮತ್ತು ಯಲಹಂಕ ಆಹಾರ ಇಲಾಖೆ ಕಚೇರಿಯಲ್ಲಿ ಸರಿಪಡಿಸಲಾಗುತ್ತದೆ.

ಯಾವೆಲ್ಲಾ ದಾಖಲೆ ಬೇಕು?
ಆಧಾರ್ ಕಾರ್ಡ್
ರೇಷನ್ ಕಾರ್ಡ್
ಐಟಿ ರಶೀದಿ

ಒಂದು ವೇಳೆ ನಿಮ್ಮ ಆದಾಯ ಮಿತಿ ಹೆಚ್ಚಿದ್ದರೆ ಬಿಪಿಎಲ್ ಕಾರ್ಡ್ ರದ್ದತಿ ಮುಂದುವರಿಯಲಿದೆ. ಇಲ್ಲದೇ ಹೋದರೆ ಮರಳಿ ಬಿಪಿಎಲ್ ಕಾರ್ಡ್ ಸಿಗಲಿದೆ. ಪ್ರತಿಯೊಬ್ಬರ ಕಾರ್ಡ್ ಪರಿಶೀಲನೆ ನಡೆಸಿ ಬಿಪಿಎಲ್ ಗೆ ಅರ್ಹರೋ, ಅನರ್ಹರೋ ಎಂದು ತೀರ್ಮಾನಿಸಲಾಗುತ್ತದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments