Webdunia - Bharat's app for daily news and videos

Install App

Hubballi: ಹುಬ್ಬಳ್ಳಿ ಬಾಲಕಿ ಮೇಲೆ ಆಗಿದ್ದಂತೇ ಕೇರಳದಲ್ಲೂ ನಡೆದಿತ್ತು ರೇಪ್ ಆಂಡ್ ಮರ್ಡರ್: ಆ ಪಾಪಿಗೆ ಸಿಕ್ಕ ಶಿಕ್ಷೆಯೇನು

Krishnaveni K
ಮಂಗಳವಾರ, 15 ಏಪ್ರಿಲ್ 2025 (10:19 IST)
ಬೆಂಗಳೂರು: ಮನೆ ಎದುರು ಆಟವಾಡಿಕೊಂಡಿದ್ದ ಬಡ ದಂಪತಿಯ 5 ವರ್ಷದ ಮಗಳನ್ನು ಬಿಹಾರ ಮೂಲದ ಪಾಪಿ ಪುಸಲಾಯಿಸಿ ಎತ್ತಿಕೊಂಡು ಹೋಗಿ ರೇಪ್ ಆಂಡ್ ಮರ್ಡರ್ ಮಾಡಿದ ಪ್ರಕರಣ ಜನರಿಗೆ ಆಘಾತ ನೀಡಿದೆ. ಇಂತಹದ್ದೇ ಪ್ರಕರಣ ಕೇರಳದಲ್ಲೂ ಎರಡು ವರ್ಷಗಳ ಹಿಂದೆ ನಡೆದಿತ್ತು.

ಕೇರಳದ ಆಲುವಾದಲ್ಲಿ ಬಡ ದಂಪತಿಯ ಐದು ವರ್ಷದ ಮಗಳು ಮನೆ ಎದುರು ಆಟವಾಡಿಕೊಂಡಿದ್ದಳು. ಆಕೆಯನ್ನು ಬಿಹಾರ ಮೂಲದ 28 ವರ್ಷದ ಕಾಮುಕ ಅಶ್ಫಾಕ್ ಅಲಾಮ್ ಪುಸಲಾಯಿಸಿ ಜೊತೆಗೆ ಕರೆದುಕೊಂಡು ಹೋಗಿದ್ದ. ಬಳಿಕ ಆಲುವಾ ಮಾರ್ಕೆಟ್ ಬಳಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ಈ ಭೀಕರ ಹತ್ಯೆ ಕೇರಳದ ಜನರನ್ನು ಬೆಚ್ಚಿಬೀಳಿಸುವಂತೆ ಮಾಡಿತ್ತು.

ಕೃತ್ಯ ನಡೆದ ಒಂದು ದಿನದ ಬಳಿಕ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದ. ಮಾದಕ ದ್ರವ್ಯದ ವ್ಯಸನಿಯಾಗಿದ್ದ ಆರೋಪಿ ಅದೇ ಮತ್ತಿನಲ್ಲಿ ಕೃತ್ಯವೆಸಗಿದ್ದ ಎನ್ನಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸೆಷನ್ಸ್ ಕೋರ್ಟ್ ಆರೋಪಿಯ ವಿಚಾರಣೆ ನಡೆಸಿತ್ತು.

ಆತನ ವಿರುದ್ಧ ಅಪಹರಣ, ಅತ್ಯಾಚಾರ, ಹಿಂಸೆ, ಸಾಕ್ಷ್ಯ ನಾಶ ಸೇರಿದಂತೆ ಸುಮಾರು 13 ಕೇಸ್ ಗಳನ್ನು ದಾಖಲಿಸಲಾಗಿತ್ತು. ವಿಚಾರಣೆ ನಡೆದು 2023 ರಲ್ಲಿ ಜಿಲ್ಲಾ ಕೋರ್ಟ್ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು.ಅದೂ ಮಕ್ಕಳ ದಿನಾಚರಣೆ ದಿನವೇ ಆರೋಪಿಗೆ ಶಿಕ್ಷೆ ಘೋಷಣೆಯಾಗಿತ್ತು. ಇದೀಗ ಹುಬ್ಬಳ್ಳಿಯಲ್ಲಿ ನಡೆದ ಘಟನೆಯೂ ಅದನ್ನೇ ನೆನಪಿಸುವಂತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ