Webdunia - Bharat's app for daily news and videos

Install App

ಚಿಕ್ಕತಿರುಪತಿ ದೇವಾಲಯದಲ್ಲಿ ಹುಂಡಿ ಎಣಿಕೆ

Webdunia
ಬುಧವಾರ, 28 ಜುಲೈ 2021 (18:48 IST)
ಕೋಲಾರದ ಚಿಕ್ಕತಿರುಪತಿಯ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಮಾಡುತ್ತಿದ್ದು, ಹುಂಡಿ ಎಣಿಕೆ ವೇಳೆ ಭಕ್ತರು ದೇವರಿಗೆ ಬರೆದಿರುವ ವಿಚಿತ್ರ ಪತ್ರವೊಂದು ಪತ್ತೆಯಾಗಿದೆ‌. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಚಿಕ್ಕತಿರುಪತಿಯ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ಮಾಡುವಾಗ,‌ ನಿಶ್ಚಿತಾರ್ಥವಾಗಿರುವ ಮದುವೆ ಮುರಿದು ಬೀಳಲಿ ಎಂದು ದೇವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಇನ್ನು ಪತ್ರದಲ್ಲಿ ಮದುವೆಯಾಗಬೇಕಿರುವ ವಧು ಸೇರಿದಂತೆ ಅವರ ಕುಟುಂಬಸ್ಥರ ಐವರ ಹೆಸರುಗಳನ್ನ ಬರೆದು ಇವರಿಗೆ ಶಿಕ್ಷೆ ಕೊಡು ಎಂದು ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ನನಗಾಗಲಿ ನನ್ನ ಕುಟುಂಬಸ್ಥರಿಗಾಗಲೀ ಅವರಿಂದ ತೊಂದರೆ ಆಗದಂತೆ ಕಾಪಾಡು ಎಂದು ಮನವಿ ಮಾಡಿದ್ದು,  ನಿಶ್ಚಿತಾರ್ಥ ಮುರಿದು ಬೀಳಲಿ, ಕೋರ್ಟ್‌, ಕೇಸ್ ಎನ್ನದೆ ಸಂಧಾನಕ್ಕೆ ಬರಲೆಂದು ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.  ಜೊತೆಗೆ ಮುರಿದು ಬಿದ್ದ ನಂತರ ನಿಶ್ಚಿತಾರ್ಥದ ಖರ್ಚು ಬಂದು ತೆಗೆದುಕೊಂಡು ಹೋಗಲಿ, ಮತ್ತೆ ಜೀವನದಲ್ಲಿ ಅವರ ಮುಖವನ್ನು ನಾವು ನೋಡದಂತೆ ಮಾಡು ಎಂದು ಪತ್ರದ ಮುಖೇನ ದೇವರಲ್ಲಿ ಬೇಡಿಕೊಳ್ಳಲಾಗಿದೆ‌‌. ಇನ್ನು ಪ್ರತಿಬಾರಿಯೂ ಹುಂಡಿ ಎಣಿಕೆ ವೇಳೆ ಈ ರೀತಿಯ ವಿಚಿತ್ರ ಪತ್ರಗಳು ಪತ್ತೆಯಾಗುತ್ತಿದ್ದು, ಅಮಾನ್ಯಗೊಂಡ ಹಳೆಯ ನೋಟುಗಳು, ವಿದೇಶಿ ಕರೆನ್ಸಿ ಸೇರಿದಂತೆ ಇತರೆ ವಸ್ತುಗಳನ್ನ ದೇವರಿಗೆ ಹುಂಡಿಯಲ್ಲಿ ಹಾಕುವ ಮೂಲಕ ಸಮರ್ಪಣೆ ಮಾಡುತ್ತಾರೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajnath Singh: ಆಪರೇಷನ್ ಸಿಂಧೂರ್ ಎಂದು ಹೆಸರಿಟ್ಟಿದ್ದು ಯಾರೆಂದು ಬಹಿರಂಗಪಡಿಸಿದ ರಾಜನಾಥ್ ಸಿಂಗ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ರೌಡಿ ಶೀಟರ್ ಅಧ್ಯಕ್ಷ: ಯಾಕೆ ಆಗಬಾರದು ಎಂದ ಸಚಿವ ದಿನೇಶ್ ಗುಂಡೂರಾವ್

ನಮ್ಮ ಸಹಾಯ ಪಡೆದು ನಮಗೇ ದ್ರೋಹ ಬಗೆಯುತ್ತೀರಾ: ಟರ್ಕಿ, ಚೀನಾಗೆ ಭಾರತ ತಕ್ಕ ಪಾಠ

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

ಪಾಕ್ ಮೇಲೆ ಎಲ್ಲಿ ಯುದ್ಧ ಮಾಡಿದ್ರು ಎಂದ ಕೈ ಶಾಸಕ: ನೀವೇ ನಿಜವಾದ ದುಷ್ಮನ್ ಗಳು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments