Publish Date: Mon, 26 Jun 2023 (15:34 IST)
Updated Date: Mon, 26 Jun 2023 (16:42 IST)
ನಮ್ಮ ಸಮಾಜದಿಂದ ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗಲಿ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಹೇಳಿಕೆ ಬೆನ್ನಲ್ಲೇ, ಸ್ವತಃ ಸತೀಶ್ ಜಾರಕಿಹೊಳಿ ಅವರು ಸಹ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಕೆ.ಎನ್.ರಾಜಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ನಾನೂ ಸಿಎಂ ಆಗುತ್ತೇನೆ. ಆದರೆ ಈಗ ಅಲ್ಲ ಮುಂದಿನ ಅವಧಿಯಲ್ಲಿ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರ ನಂತರ ತಾವೂ ಸಿಎಂ ಆಕಾಂಕ್ಷಿ ಎಂದು ಹೇಳಿದ್ದಾರೆ.