ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ

Webdunia
ಗುರುವಾರ, 13 ಅಕ್ಟೋಬರ್ 2022 (18:50 IST)
ಟ್ಯೂಶನ್​​ಗೆ ಬಂದ 10 ವರ್ಷದ ವಿದ್ಯಾರ್ಥಿನಿಯನ್ನು ಟ್ಯೂಶನ್​​ ಸೆಂಟರ್​​ನಲ್ಲಿ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಯೇ ಕೊಲೆ ಮಾಡಿ ಶವವನ್ನು ನಿರ್ಮಾಣ ಹಂತದ ಕಟ್ಟಡದ ನೀರಿನ ಪಂಪ್​​ನಲ್ಲಿ ಹಾಕಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿತ್ತು. ಈ ಸಂಬಂಧ ಟ್ವೀಟ್​​ ಮಾಡಿರುವ ಮಾಜಿ ಸಿಎಂ H.D. ಕುಮಾರಸ್ವಾಮಿ, ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಹೇಳಿದ್ರು. ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದು ಟ್ವೀಟ್​​ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments