Select Your Language

Notifications

webdunia
webdunia
webdunia
webdunia

ದರ್ಶನ್ ಆ ವಿಚಾರಕ್ಕೂ ನನಗೂ ಸಂಬಂಧವಿಲ್ಲ: ಜಮೀರ್ ಅಹ್ಮದ್

ದರ್ಶನ್ ಆ ವಿಚಾರಕ್ಕೂ ನನಗೂ ಸಂಬಂಧವಿಲ್ಲ: ಜಮೀರ್ ಅಹ್ಮದ್

Sampriya

ಬೆಂಗಳೂರು , ಭಾನುವಾರ, 1 ಸೆಪ್ಟಂಬರ್ 2024 (15:51 IST)
Photo Courtesy X
ಬೆಂಗಳೂರು: ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಚಿವ ಜಮೀರ್ ಅಹ್ಮದ್ ಕಾರಣ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ  ಜಮೀರ್ ಅವರು,  ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಇದು ಪೊಲೀಸ್ ಇಲಾಖೆ ಕೈಗೊಂಡ ಕ್ರಮ ಎಂದರು.

ದರ್ಶನ್ ಅವರು ಜೈಲಿನಲ್ಲಿ ಟೀ ಕಪ್ ಹಿಡಿದು ಸಿಗರೇಟ್ ಸೇದುತ್ತಿದ್ದ ಫೋಟೋ ವೈರಲ್ ಆಗಿತ್ತು. ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಸಾರವಾದ ಬೆನ್ನಲ್ಲೇ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ. ನಾನು ಜಿಲ್ಲಾ ಉಸ್ತುವಾರಿ ಮಂತ್ರಿ ಆಗಿರುಬಹುದು, ಆದರೆ ನಾನು ಡಿಜಿ ಅಲ್ಲ ಎಂದರು.

ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ವಿಐಪಿ ಟ್ರೀಟ್‌ಮೆಂಟ್ ಪಡೆಯುತ್ತಿರುವ ಹಿನ್ನೆಲೆ ಹತ್ಯೆ ಪ್ರಕರಣ ಎಲ್ಲ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇದೀಗ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿದ್ದಾರೆ.

ಇನ್ನೂ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಿದ ಹಿಂದೆ ಸಚಿವ ಜಮೀರ್ ಅಹ್ಮದ್ ಕೈವಾಡವಿದೆ ಎಂದು ಹೇಳಲಾಗಿತ್ತು. ಆದರೆ ಇದು ಪೊಲೀಸ್ ಇಲಾಖೆ ಕೈಗೊಂಡ ಕ್ರಮ ಎಂದು ಜಮೀರ್ ಹೇಳಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಗೂ ಬಂತು ಎತ್ತಿನಹೊಳೆ ಯೋಜನೆಯ ನೀರು: ಗೌರಿ ಹಬ್ಬದಂದೇ ಏತ ಕಾಮಗಾರಿ ಲೋಕಾರ್ಪಣೆ