'ಆರ್ ಎಸ್ ಎಸ್ ನಿಂದ ನಾನು ಕಲಿಯುವುದು ಏನೂ ಇಲ್ಲ’: ಕುಮಾರಸ್ವಾಮಿ

Webdunia
ಬುಧವಾರ, 20 ಅಕ್ಟೋಬರ್ 2021 (14:04 IST)
ವಿಜಯಪುರ  : ಆರ್ ಎಸ್ ಎಸ್ ಶಾಖೆಯಿಂದ ತಮಗೆ ಕಲಿಯುವುದು ಏನೂ ಇಲ್ಲ, ಆರ್ ಎಸ್ ಎಸ್ ನಿಂದ ತರಬೇತಿ ಪಡೆದು ಬಂದವರು ವಿಧಾನಸೌಧದಲ್ಲಿ ಕಲಾಪ ನಡೆಯುವಾಗ ನೀಲಿ ಚಿತ್ರ ವೀಕ್ಷಣೆ ಮಾಡುತ್ತಿರುತ್ತಾರೆ ಎಂದು ಬಿಜೆಪಿ ನಾಯಕರಿಗೆ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇತ್ತೀಚೆಗೆ ಕುಮಾರಸ್ವಾಮಿಯವರನ್ನು ಆರ್ ಎಸ್ ಎಸ್ ಶಾಖೆಗೆ ಬಂದು ಸಂಘದ ಚಟುವಟಿಕೆಗಳನ್ನು ಕಲಿಯುವಂತೆ ಆಹ್ವಾನ ನೀಡಿದ್ದರು.
ಅದಕ್ಕೆ ನಿನ್ನೆ ವಿಜಯಪುರದಲ್ಲಿ ಮಾತನಾಡುತ್ತಾ ಪ್ರತಿಕ್ರಿಯಿಸಿದ ಕುಮಾರಸ್ವಾಮಿಯವರು, ನನಗೆ ಅವರ ಸ್ನೇಹ ಬೇಡ. ಆರ್ ಎಸ್ ಎಸ್ ಶಾಖೆಯಲ್ಲಿ ಏನು ಹೇಳಿಕೊಡುತ್ತಾರೆ ಎಂದು ನನಗೆ ಗೊತ್ತಿಲ್ಲವೇ? ವಿಧಾನಸೌಧದಲ್ಲಿ ಹೇಗೆ ವರ್ತಿಸಬೇಕು, ಸದನದಲ್ಲಿ ಕಲಾಪ ನಡೆಯುವಾಗ ಬ್ಲೂ ಫಿಲ್ಮ್ ನೋಡುತ್ತಿರುತ್ತಾರೆ. ಆರ್ ಎಸ್ ಎಸ್ ಶಾಖೆಯಲ್ಲಿ ಅಂತದ್ದನ್ನು ಹೇಳಿಕೊಡುವುದಿಲ್ಲವೇ? ಅಂತಹ ಕೆಟ್ಟ ವಿಷಯಗಳನ್ನು ಕಲಿಯಲು ನಾನು ಆರ್ ಎಸ್ ಎಸ್ ಶಾಖೆಗೆ ಹೋಗಬೇಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಉಪ ಚುನಾವಣೆ ಪ್ರಚಾರದ ವೇಳೆ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ನನಗೆ ಬಿಜೆಪಿಯವರ ಆರ್ ಎಸ್ ಎಸ್ ಶಾಖೆ ಬೇಡ. ನಾನು ಇಲ್ಲಿ ಬಡಜನರ ಬಗ್ಗೆ ಕಲಿತ ಶಾಖೆ ಸಾಕು, ಅವರ ಆರ್ ಎಸ್ ಎಸ್ ಶಾಖೆಯಿಂದ ನಾನು ಕಲಿಯುವುದು ಏನೂ ಇಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆಗೆ ಮಹಿಳೆಯರ ಪ್ರವೇಶ ನಿರ್ಬಂಧ ಲಿಂಗ ತಾರತಮ್ಯದ ವಿಷಯವಲ್ಲ: ಸುಪ್ರೀಂಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಆಂಧ್ರಪ್ರದೇಶ ರಾಜಧಾನಿಯಾಗಿ ಅಮರಾವತಿ: ಹನ್ನೆರಡು ವರ್ಷಗಳ ಅನಿಶ್ಚಿತತೆಗೆ ಕೊನೆಗೂ ತೆರೆ

ಅಮೆರಿಕಾದ ಪನಾಮ ಸೇತುವೆ ಬಳಿ ಸ್ಪೋಟ: ಭೀಕರ ವಿಡಿಯೋ ಇಲ್ಲಿದೆ

17 ಬಜೆಟ್ ಮಂಡಿಸುವಾಗ ರಾಜಕೀಯ ಪುನರ್ಜನ್ಮ ನೀಡಿದ ಬಾಗಲಕೋಟೆ ನೆನಪಾಗಲಿಲ್ಲವೇ: ಗೋವಿಂದ ಕಾರಜೋಳ

2028 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರ್ನಾಮ: ಬಿ.ಶ್ರೀರಾಮುಲು

ಮುಂದಿನ ಸುದ್ದಿ
Show comments