Publish Date: Wed, 12 Apr 2023 (11:04 IST)
Updated Date: Wed, 12 Apr 2023 (11:11 IST)
ಬೆಂಗಳೂರು : ಎರಡು ಕಡೆ ಟಿಕೆಟ್ ಕೊಡ್ತಾರೆ ಅಂತಾ ನಾನು ಕನಸು ಮನಸಲ್ಲೂ ಅನ್ಕೊಂಡಿರಲಿಲ್ಲ. ವಿಧಿ ನಿಯಮ, ವರಿಷ್ಠರ ತೀರ್ಮಾನ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಿಂದರಾಜನಗರ ನನ್ನ ಜನ್ಮ ಭೂಮಿ. ವರುಣಾ, ಚಾಮರಾಜನಗರ ನನ್ನ ಕರ್ಮ ಭೂಮಿಯಾಗಿದೆ. ಭಗವಂತನ ಇಚ್ಛೆ ಹೇಗಿದಿಯೊ ನೋಡೋಣ. ನಾಳೆಯಿಂದ ವರುಣಾ, ಚಾಮರಾಜನಗರದಲ್ಲಿ ಪ್ರಚಾರ ಶುರು ಮಾಡುತ್ತೇನೆ ಎಂದು ಹೇಳಿದರು.
ಗುಬ್ಬಿ, ಗೋವಿಂದರಾಜನಗರ ಮಗನಿಗೆ ಕೇಳಿದ್ದೇನೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆಗೂ ಮಾತನಾಡಿದ್ದೇನೆ. ಮಗನಿಗೆ ಟಿಕೆಟ್ ಕೊಡೋದು ಬಿಡೋದು ಹೈಕಮಾಂಡ್ಗೆ ಬಿಟ್ಟದ್ದು, ಬೆಂಬಲಿಗರು ಸಂಯಮದಿಂದ ಇರಬೇಕು ಎಂದರು.