Webdunia - Bharat's app for daily news and videos

Install App

ಬಿಎಸ್‌ ಯಡಿಯೂರಪ್ಪ ವಿರುದ್ಧ ಇನ್ನೂ ಧ್ವನಿ ಎತ್ತುತ್ತೇನೆ: ಬಸನಗೌಡ ಪಾಟೀಲ್ ಯತ್ನಾಳ್‌

Sampriya
ಶನಿವಾರ, 29 ಮಾರ್ಚ್ 2025 (15:14 IST)
ಬೆಂಗಳೂರು: ಬಿಜೆಪಿಯಿಂದ ಉಚ್ಚಾಟನೆಗೊಂಡ ನಂತರ ಮತ್ತಷ್ಟು ರಗಡ್ ಆಗಿರುವ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೇ ಯಡಿಯೂರಪ್ಪ ಕುಟುಂಬದ ವಿರುದ್ಧ ಧ್ವನಿ ಎತ್ತಿದ್ದಾರೆ.

ಕರ್ನಾಟಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬೆಂಬಲಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.

ANI ಜೊತೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, "ರಾಜ್ಯದಲ್ಲಿ ಪಕ್ಷವನ್ನು ತಮ್ಮ ಕುಟುಂಬದ ಪಕ್ಷವನ್ನಾಗಿ ಮಾಡಿಕೊಂಡ ಬಿಎಸ್ ಯಡಿಯೂರಪ್ಪ ಮತ್ತು ಅವರ ಮಗನ ವಿರುದ್ಧ ನಾನು ಧ್ವನಿ ಎತ್ತುತ್ತೇನೆ. ಪ್ರಧಾನಿ ಮೋದಿ, ಪ್ರತಿ ಸಾರ್ವಜನಿಕ ರ್ಯಾಲಿಯಲ್ಲಿ, ಸ್ವಜನಪಕ್ಷಪಾತ, ಭ್ರಷ್ಟಾಚಾರ ಮತ್ತು 'ಹೊಂದಾಣಿಕೆ' ರಾಜಕೀಯವನ್ನು ಕೊನೆಗೊಳಿಸುವುದಾಗಿ ಯಾವಾಗಲೂ ಮಾತನಾಡಿದ್ದಾರೆ. ನಾನು ಕೂಡ ಅದಕ್ಕಾಗಿ ಧ್ವನಿ ಎತ್ತಿದ್ದೇನೆ ಎಂದರು.

ಪಕ್ಷದಲ್ಲಿ ಯಡಿಯೂರಪ್ಪ ಕುಟುಂಬದ ಪ್ರಭಾವದ ಬಗ್ಗೆ ನಾನು ಪ್ರಶ್ನೆ ಮಾಡಿದೆ. ಬಿಜೆಪಿ ನಾಯಕತ್ವವನ್ನು ಪ್ರಶ್ನಿಸಿದೆ. ಯಡಿಯೂರಪ್ಪ ಸಂಸದೀಯ ಮಂಡಳಿ ಸದಸ್ಯ, ಅವರ ಕಿರಿಯ ಮಗ ರಾಜ್ಯಾಧ್ಯಕ್ಷ ಮತ್ತು ಶಾಸಕ. ಇದು ವಂಶಪಾರಂಪರ್ಯ ರಾಜಕೀಯವಲ್ಲವೇ? ನಾನು ಈ ಪ್ರಶ್ನೆಯನ್ನು ಹೈಕಮಾಂಡ್‌ಗೆ ಕೇಳಿದೆ."

"ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ, ಶಿವಮೊಗ್ಗದಲ್ಲಿ ನಡೆದ ಗಲಭೆಯ ಸಮಯದಲ್ಲಿ ಹಿಂದೂಗಳನ್ನು ಬೆಂಬಲಿಸಲಿಲ್ಲ ಅಥವಾ ಹಿಂದೂ ಹಿತಾಸಕ್ತಿಗಳನ್ನು ರಕ್ಷಿಸಲಿಲ್ಲ. ಅವರ ಮಗ, ಪ್ರಸ್ತುತ ರಾಜ್ಯಾಧ್ಯಕ್ಷರು ಸಹ ಎಂದಿಗೂ ಹಿಂದೂಗಳನ್ನು ಬೆಂಬಲಿಸಿಲ್ಲ. ಅದಕ್ಕಾಗಿಯೇ ನಾವು ಅವರ ಕುಟುಂಬದ ಭ್ರಷ್ಟಾಚಾರದ ಬಗ್ಗೆ ಅಭಿಪ್ರಾಯ ಹೊರಹಾಕಿದೆ. ಇದೀಗ ಅದೇ ವಿಚಾರಕ್ಕೆ ನನ್ನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಯಿತು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಮುಂದಿನ ಸುದ್ದಿ
Show comments