Webdunia - Bharat's app for daily news and videos

Install App

ಯಾರಿಗೆ ಟಿಕೆಟ್ ಕೊಟ್ಟರೂ ನಾನು ಕೆಲಸ ಮಾಡುತ್ತೇನೆ : ಭವಾನಿ ರೇವಣ್ಣ

Webdunia
ಬುಧವಾರ, 21 ಸೆಪ್ಟಂಬರ್ 2022 (10:32 IST)
ಹಾಸನ : ವಿಧಾಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಾಕಷ್ಟು ಜನ ನನಗೆ ಒತ್ತಡ ಹೇರುತ್ತಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದಿಂದ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಕೆಲಸ ಮಾಡುತ್ತೇನೆ.

ಜೆಡಿಎಸ್  ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಹಾಸನದ ಎರಡನೇ ವಾರ್ಡ್ನ ಅಶೋಕ ಬಡಾವಣೆಯಲ್ಲಿ 12.40 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಪುತ್ರ ಹಾಗೂ ಸಂಸದ ಪ್ರಜ್ವಲ್ ಪರವಾಗಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು,

ಯಾರಿಗೆ ಟಿಕೆಟ್ ಕೊಟ್ಟರೂ ಭವಾನಿಯಾಗಿ, ರೇವಣ್ಣ ಅವರ ಪತ್ನಿಯಾಗಿ, ಪ್ರಜ್ವಲ್, ಸೂರಜ್ ಅವರ ತಾಯಿಯಾಗಿ ಕಾರ್ಯಕರ್ತರ ಜೊತೆ ಏನು ಕೆಲಸ ಮಾಡುತ್ತಿದ್ದೇನೋ, ಮುಂದೆಯೂ ಅದೇ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಸಾರ್ವಜನಿಕರು ನನ್ನನ್ನು ತಮ್ಮ ಮನೆ ಮಗಳು ಎನ್ನುವ ಭಾವನೆಯಲ್ಲಿ ಕಾರ್ಯಕ್ರಮಕ್ಕೆ ಕರೆದಾಗ ಬರುತ್ತಿದ್ದೇನೆ. ನನ್ನ ಮಕ್ಕಳು ಮಾತ್ರ ಅಲ್ಲ, ದೇವೇಗೌಡರ ರಾಜಕೀಯ ಜೀವನದಲ್ಲಿ ಹಾಸನದ ಜನರ ಜೊತೆ ನಿಂತಿದ್ದಾರೆ. ಅವರು ಕರೆದಾಗ ಬರದೆ ಇರಬಾರದು ಎನ್ನುವ ಕಾರಣಕ್ಕೆ ಬರುತ್ತಾ ಇದ್ದೇನೆ ಅಷ್ಟೇ. ಅದನ್ನು ಬಿಟ್ಟರೆ ಬೇರೆ ಯಾವುದೇ ಚರ್ಚೆ ಇಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments