ನಾನು ಚುನಾವಣೆಯಲ್ಲಿ ಗೆಲ್ಲುತ್ತೇನೆ : ಹೊರಟ್ಟಿ

Webdunia
ಮಂಗಳವಾರ, 19 ಏಪ್ರಿಲ್ 2022 (15:02 IST)
ಹಾವೇರಿ : ನಾನು ಚುನಾವಣೆಗೆ ನಿಲ್ಲುತ್ತೇನೆ, ಗೆಲ್ಲುತ್ತೇನೆ. ಶಿಕ್ಷಕರು ನನ್ನನ್ನು ಎಂದಿಗೂ ಕೈಬಿಟ್ಟಿಲ್ಲ, ಬಿಡುವುದಿಲ್ಲ.

24 ಗಂಟೆ ಕೆಲಸ ಮಾಡುವವನನ್ನು ಬಿಟ್ಟು ಬೇರೆಯವರಿಗೆ ಯಾಕೆ ವೋಟು ಹಾಕುತ್ತಾರೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿಕೆ ನೀಡಿದರು.

ಸಭಾಪತಿ ಇದ್ದವನು ಪಕ್ಷಾಂತರ ಮಾಡಿ ಹೋಗಬೇಕಾ? ಹಾಗಿದ್ದರೆ ರಾಜೀನಾಮೆ ಕೊಟ್ಟು ಹೋಗುವೆ. ಬರುವ ಚುನಾವಣೆಯಲ್ಲಿ ಬಿಜೆಪಿಗೆ ಹೋಗುವ ಬಗ್ಗೆ ವಿಚಾರ ಮಾಡುತ್ತಿದ್ದೇನೆ.

ಅನೇಕ ಸ್ನೇಹಿತರು ಕರೆಯುತ್ತಿದ್ದಾರೆ ಎಂದು ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ? ಸಂವಿಧಾನಬದ್ಧ ಹುದ್ದೆಯಲ್ಲಿದ್ದು ಎಲ್ಲೋ ಬಾರ್ನಲ್ಲಿ ಹೋಗಿ ಕೂತರೆ ಹುದ್ದೆ ಮುರಿದ ಹಾಗೆ. ಅಕ್ರಮ ಚಟುವಟಿಕೆ ಮಾಡಿದರೆ ಸಂವಿಧಾನಬದ್ಧ ಹುದ್ದೆಯನ್ನು ಮುರಿದಂತೆ ಎಂದರು. 

ನಾನು ಅಚ್ಚುಕಟ್ಟಾಗಿ ಕಟ್ಟುನಿಟ್ಟಿನಿಂದ ಸದನ ನಡೆಸಿದ್ದೇನೆ. ಸದನ ನಡೆಸಿದ ರೀತಿಯನ್ನು ನೀವು ನೋಡಿರಬಹುದು. ಯಾವುದರಲ್ಲೂ ನಿಯಮ ಬಿಟ್ಟು ಏನೂ ಮಾಡಿಲ್ಲ.

ಇಡಿ ರಾಜ್ಯವೇ ನನಗೆ ಒಳ್ಳೆಯವರು ಎನ್ನುತ್ತಿರುವಾಗ ಇನ್ನೊಬ್ಬರು ಕೆಟ್ಟವರು ಎನ್ನುವುದರ ಬಗ್ಗೆ ಏನೂ ಮಾಡಲು ಆಗುವುದಿಲ್ಲ. ಪ್ರಜಾಪ್ರಭುತ್ವ ಬೇರೆಯವರ ಬಗ್ಗೆ ಟೀಕೆ ಮಾಡುವುದಿಲ್ಲ. ಯಾರು ಏನೇ ಹೇಳಿದರೂ ಅದಕ್ಕೆ ನನ್ನ ತಕರಾರು ಇಲ್ಲ. ನನ್ನ ನಿರ್ಧಾರದ ಪ್ರಕಾರ ನಾನು ಸರಿಯಿದ್ದೇನೆ ಎಂದರು.

ಬೆಡ್ ರೂಂ ಬೇರೆ ಅಂಗಳವೇ ಬೇರೆ. ಬೆಡ್ ರೂಂನಲ್ಲಿ ಮಾಡುವುದು ಬೆಡ್ ರೂಂನಲ್ಲಿಯೇ ಮಾಡಬೇಕು. ನನಗೆ ಈವರೆಗೂ ಯಾವುದೇ ಕಪ್ಪು ಚುಕ್ಕೆ ಇಲ್ಲ. ಎಲ್ಲರನ್ನೂ ಸಮಾನವಾಗಿ ನೋಡುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments