ಈದ್ಗಾ ಮಿಲಾದ್ ಮೆರವಣಿಗೆಯಲ್ಲಿ ಸಿಪಿಐ ಜೊತೆ ವಾಗ್ವಾದ

Webdunia
ಸೋಮವಾರ, 10 ಅಕ್ಟೋಬರ್ 2022 (14:06 IST)
ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಸೌಂಡ್ ದೊಡ್ಡದಾಗಿ ಹಾಕಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸೌಂಡ್ ಕಡಿಮೆ ಮಾಡಿ ಎಂದು ಹೇಳಿದ ಸಿಪಿಐ ಸಂತೋಷ ಶೆಟ್ಟಿಯವರೊಂದಿಗೆ ಕೆಲವು ಯುವಕರು ಉದ್ದಟತನ ವರ್ತನೆ ತೋರಿದ ಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದಲ್ಲಿ ಈದ್ ಮಿಲಾದ್ ಪ್ರಯುಕ್ತ ಮುಸ್ಲಿಂ ಸಮುದಾಯದವರು ವಾಹನಗಳಲ್ಲಿ ಟ್ಯಾಬ್ಲೋಗಳೊಂದಿಗೆ ಅಲಂಕರಿಸಿ ಮೆರವಣಿಗೆ ಮಾಡುತ್ತಿದ್ದರು. ಈ ಮೆರವಣಿಗೆಯಲ್ಲಿ ಕೆಲವರು ಡಿಜೆ ಬಳಸಿಕೊಂಡು ಸೌಂಡ್ ಕಡಿಮೆ ಮಾಡಿ ಸಾಗಿದ್ದರು. ಆದರೆ ಒಂದು ತಂಡ ಮಾತ್ರ ಜೋರು ಡಿಜೆ ಸೌಂಡ್‌ ಮೂಲಕ ಹಾಡುಗಳನ್ನು ಹಾಕಿಕೊಂಡು ಹೋಗುತ್ತಿದ್ದರು. ಇದನ್ನು ಮೆರವಣಿಗೆಯಲ್ಲಿ ಇದ್ದ ಕೆಲವರು ಅಸಮಾಧಾನ ವ್ಯಕ್ತಪಡಿಸಿ ವಿಷಯವನ್ನು ಅಂಕೋಲಾ ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ ಅವರ ಗಮನಕ್ಕೆ ತಂದಿದ್ದರು.
 
ತಕ್ಷಣ ಸಿಪಿಐ ಸಂತೋಷ ಶೆಟ್ಟಿಯವರು ಡಿಜೆ ಬಳಿ ತೆರಳಿ ಡಿಜೆ ಸೌಂಡ್ ಕಡಿಮೆ ಮಾಡುವಂತೆ ತಿಳಿಸಿದ ಸಂದರ್ಭದಲ್ಲಿ ಆ ತಂಡದ ಯುವಕರು ಸಿಪಿಐಯೊಂದಿಗೆ ವಾಗ್ವಾದಕ್ಕಿಳಿದ್ದಿದ್ದಾರೆ. ಸಿಪಿಐ ಶಾಂತವಾಗಿ ಯುವಕರಿಗೆ ಮನವರಿಕೆ ಮಾಡುವ ಪ್ರಯತ್ನ ನಡೆಸುತ್ತಿದ್ದರೂ ಅದನ್ನು ಕೇಳದ ಹಾಗೆ ಯುವಕರು ವರ್ತಿಸಿದ್ದಾರೆ. ಬಳಿಕ ಸಮಾಧಾನದಿಂದಲೇ ಯುವಕರೊಂದಿಗೆ ಮಾತನಾಡಿ ಮೆರವಣಿಗೆ ಸಾಗಲು ಅವಕಾಶ ಮಾಡಿಕೊಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಮುಂದಿನ ಸುದ್ದಿ
Show comments