Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು:ಚೆನ್ನೈಗೆ ಅಪ್ಪಳಿಸುವ ಚಂಡಮಾರುತದಿಂದ ಕರ್ನಾಟಕಕ್ಕೆ ಪರಿಣಾಮ ಬೀರಲಿದ್ದು, ಬೆಂಗಳೂರು ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಹಾನಗರದಲ್ಲಿ ಇನ್ನೂ ಎರಡ್ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಮಳೆಯಾಗಲಿದೆ.
ಮೈಸೂರು ಭಾಗ, ಉಡುಪಿವರೆಗೂ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿಯಲ್ಲಿ ಮಳೆ ಹೆಚ್ಚಾಗಲಿದೆ ಎನ್ನಲಾಗಿದೆ.