Webdunia - Bharat's app for daily news and videos

Install App

ನಿಷ್ಪಕ್ಷಪಾತವಾಗಿ ತನಿಖೆಯಾಗಿ ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗಲಿ- ಸಿಎಂ

Webdunia
ಶುಕ್ರವಾರ, 3 ಮಾರ್ಚ್ 2023 (14:48 IST)
ಮಾಡಾಳು ಪುತ್ರನ ಮೇಲೆ ಲೋಕಾಯುಕ್ತ ರೇಡ್ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ‌ ಪ್ರತಿಕ್ರಿಯಿಸಿದ್ದಾರೆ.
 
ನಾವು ಲೋಕಾಯುಕ್ತವನ್ನ ಪುನರ್ ಸ್ಥಾಪನೆ ಮಾಡಿದ್ದೇ ಭ್ರಷ್ಟಾಚಾರವನ್ನ ಮುಕ್ತವಾಗಿ ನಿಗ್ರಹಿಸಬೇಕು ಅಂತ ಈ ಲೋಕಾಯುಕ್ತ ಇಲ್ಲದಿದ್ದರೆ ಇಂತಹ ಹಲವಾರು ಪ್ರಕರಣಗಳು ಕಾಂಗ್ರೆಸ್ ಆಡಳಿತದಲ್ಲಿ ನಡೆದು ಮುಚ್ಚಿಹೋಗಿದೆ.ನಾವು ನಿಷ್ಪಕ್ಷಪಾತವಾಗಿ ತೆನಿಖೆ ಮಾಡ್ತೀವಿ ಅಂತ ಪದೇ ಪದೇ ಹೇಳುತ್ತಿದ್ದೇವೆ.ಈ ವಿಚಾರದಲ್ಲಿಯೂ ಸಹ ಲೋಕಾಯುಕ್ತ ಸರ್ವ ಸ್ವತಂತ್ರವಾಗಿರುವ ಸಂಸ್ಥೆ.ನಿಷ್ಪಕ್ಷಪಾತವಾಗಿ ತನಿಖೆಯಾಗಿ ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗಲಿ.ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಎಂದು ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ.
 
ಏನ್ ಏನ್ ಮಾಹಿತಿ ಸಿಕ್ಕಿದೆ ಹಣ ಸಿಕ್ಕಿದೆ ಲೋಕಾಯುಕ್ತ ಬಳಿ ಇದೆ.ನಿಷ್ಪಕ್ಷಪಾತವಾದ ತೆನಿಖೆ ಆಗಲಿ.ಯಾರಿಗೆ ಸೇರಿದ್ದು ಹಣ ಯಾರಿಗೋಸ್ಕರ ಆಗಿದ್ದು ಹೊರಬರಲಿ.ಸತ್ಯ ಹೊರಗಡೆ ಬರಲಿ ಅನ್ನೋದು ನಮ್ಮ ಉದ್ದೇಶ.ಯಾರು ತಪ್ಪು ಮಾಡ್ತಾರೆ ಅವರು ಶಿಕ್ಷೆ ಅನುಭಿಸುತ್ತಾರೆ.ಕಾಂಗ್ರೆಸ್ ಶಾಸಕರ ಮೇಲೆ ಹಲವಾರು ಆರೋಪವಿತ್ತು.ಅವರ ಮಂತ್ರಿಗಳ ಮೇಲೆ ಇತ್ತು.ಎಸಿಬಿ ಇದದ್ದಕ್ಕೆ ಅವರು ಕೇಸ್  ಮುಚ್ಚಿಹಾಕಿದ್ರು.ಈಗ ಲೋಕಾಯುಕ್ತ ತೆನಿಖೆಯಾದಗ ಅವರದ್ದು ಸಹ ಹೊರಗಡೆ ಬರುತ್ತೆ.ಕಾಂಗ್ರೆಸ್ ಲೋಕಾಯುಕ್ತ ಮುಚ್ಚಿಹಾಕಿರೋದಕ್ಕೆ ಇದೇ ಸಾಕ್ಷಿ.ಇವೆಲ್ಲ ಬಹಿರಂಗವಾಗುತ್ತೆ.
ಲೋಕಾಯುಕ್ತ ನಾಲ್ಕೈದು ವರ್ಷ ಮುಚ್ಚಿಹಾಕಿದ್ರಲ್ಲ.ಅದ್ರಿಂದ ನಮ್ಗೆ ಯಾವುದೇ ಮುಚ್ಚಿಡುವ ಪ್ರಶ್ನೆಯೇ ಇಲ್ಲ.ಬಹಳ ಸ್ಪಷ್ಟವಾಗಿ ಜಾರ್ಜ್ ಅವರು ವಿಧಾನಸಭೆಯಲ್ಲಿ ಹೇಳ್ತಾರೆ, ಎಸಿಬಿನೇ ಮುಂದುವರಿಸಿ ಅಂತ ಅವರು ಯಾರ ಪರವಾಗಿದ್ದಾರೆ..?ಈಗ ಈ ಘಟನೆ ಇಟ್ಟುಕೊಂಡು ತಾವು ದೊಡ್ಡ ಸ್ವಚ್ಛ ಪಕ್ಷ ಅಂತ ಹೇಳಿಕೊಳ್ಳಲು ಸಾಧ್ಯವಿಲ್ಲ.ಅವರು ಬಹಳಹಿಂದೆಯೂ ಭ್ರಷ್ಟಾಚಾರ ಮಾಡಿದ್ದಾರೆ, ಹಲವಾರು ಜನರ ಮೇಲೆ ಕೇಸ್ ಸಹ ಆಗಿದೆ, ತನಿಖೆ ಸಹ ಆಗ್ತಿದೆ.ಅವರು ಏನು ಮುಚ್ಚಿ ಹಾಕಿದ್ರೋ ಅವೆಲ್ಲ ಲೋಕಾಯುಕ್ತಕ್ಕೆ ಕೊಟ್ಟು ತನಿಖೆ ಮಾಡಿಸ್ತೀನಿ ಎಂದು ಸಿ ಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments