Webdunia - Bharat's app for daily news and videos

Install App

ಬೆಲೆ ಏರಿಕೆ ಕಾಂಗ್ರೆಸ್‌ನ ಆರನೇ ಗ್ಯಾರಂಟಿ: ಸಿಟಿ ರವಿ ವ್ಯಂಗ್ಯ

Sampriya
ಮಂಗಳವಾರ, 25 ಜೂನ್ 2024 (14:52 IST)
Photo Courtesy X
ಕಲಬುರಗಿ: ಕಾಂಗ್ರೆಸ್ ಸರ್ಕಾರದಲ್ಲಿ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಮುದ್ರಾಂಕ ಶುಲ್ಕ, ಜನನ ಮರಣ ಪ್ರಮಾಣಪತ್ರ ಪಡೆಯುವ ಶುಲ್ಕ ಹೆಚ್ಚಳ, ಅಬಕಾರಿ ಸುಂಕ ಏರಿಕೆಯ ಜತೆಗೆ ಇದೀಗ ಹಾಲಿನ ಬೆಲೆ ಏರಿಕೆ ಮಾಡುವುದರೊಂದಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆಯೆಂಬ ಅಘೋಷಿತ ಆರನೇ ಗ್ಯಾರಂಟಿಯನ್ನು ಜಾರಿಗೆ ತಂದಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವ್ಯಂಗ್ಯ ಮಾಡಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಇಂಧನ ಬೆಲೆಯನ್ನು ಕೇವಲ 1 ರೂಪಾಯಿ ಹೆಚ್ಚಳ ಮಾಡಿದ್ದಕ್ಕೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ, ಪ್ರಿಯಾಂಕ್ ಖರ್ಗೆ ಅವರು ಸ್ಕೂಟರ್‌ವೊಂದನ್ನು ಹೆಣದಂತೆ ಇರಿಸಿ ಆಕ್ರೋಶ ಹೊರಹಾಕಿದ್ದರು.

ಇದೀಗ  ಪೆಟ್ರೋಲ್, ಡೀಸೆಲ್ ಬೆಲೆಯನ್ನು ₹ 3 ಹೆಚ್ಚಳ ಮಾಡಿದ್ದಾರೆ. ಕೆಲ ತಿಂಗಳ ಹಿಂದೆ ಸೆಸ್ ಏರಿಸಿದ್ದು ಸೇರಿ ಒಟ್ಟಾರೆ ₹ 4.5 ಹೆಚ್ಚಳ ಮಾಡಿದ್ದಾರೆ. ಈಗ ಸ್ಕೂಟರ್ ಬದಲು ನಾವು ಯಾರನ್ನು ಹೊತ್ತುಕೊಂಡು ಆಕ್ರೋಶ ಹೊರಹಾಕಬೇಕೆಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments