Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಬೇಕರಿಗೆ ನುಗ್ಗಿ ಧಾಂದಲೆ

Webdunia
ಬುಧವಾರ, 1 ಮಾರ್ಚ್ 2023 (18:45 IST)
ಸಿಲಿಕಾನ್ ಸಿಟಿಯಲ್ಲಿ ಬರುಬರುತ್ತಾ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ‌ ಎಂಬತೆ ಇವತ್ತು ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಯೊಬ್ಬ ಹಲ್ಲೆ ನಡೆಸಿ ಕೊಲೆ ಜೀವ ಬೆದರಿಕೆ ಹಾಕಿದ್ದಾನೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಳಾಗಾಳದಲ್ಲಿ ಘಟನೆ ನಡೆದಿದ್ದು, ಬೇಕರಿ ಮಾಲೀಕ ರಘುನಾಥ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರಕಾಶ್ ಎಂಬ ಪುಡಿರೌಡಿ ಆಗಾಗ ಬೇಕರಿ ಬಳಿ ಬಂದು ಟೀ,ಕಾಫಿ ಕುಡಿದು ಹೋಗುತ್ತಿದ್ದ. ಇವತ್ತು ಪ್ರಕಾಶನಿಗೆ ಏನ್ ಆಯ್ತೋ ಗೊತ್ತಿಲ್ಲ.. ಕ್ಷುಲ್ಲಕ ಕಾರಣಕ್ಕೆ ಬೇಕರಿ ಬಳಿ ಬಂದು ರಘುನಾಥ್ ಬಳಿ ಕಿರಿಕ್ ಶುರುಮಾಡಿದ್ದಾನೆ. ಮಾತಿಗೆ ಮಾತು ಬೆಳೆದು ಬೇಕರಿಗೆ ನುಗ್ಗಿರುವ ಪ್ರಕಾಶ್, ಶೋಕೇಸ್ ಗ್ಲಾಸ್ ಒಡೆದು ಹಾಕಿ ಅವಾಚ್ಯ ಶಬ್ದಗಳಿಂದ ರಘುನಾಥ್ಗೆ  ನಿಂದಿಸಿದ್ದಾನೆ. ಪ್ರಶ್ನಿಸಿದ್ದಕ್ಕೆ ರಘುನಾಥ್ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ‌. ಇನ್ನೂ ಪ್ರಕಾಶ್ ನಡೆಸಿರುವ ದಾಂಧಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೊಂದ ಬೇಕರಿ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  ಸದ್ಯ ಪ್ರಕರಣ ದಾಖಲಿಕೊಂಡಿರುವ ಪೊಲೀಸರು ಬೇಕರಿಗೆ ನುಗ್ಗಿ ದಾಂಧಲೆ ನಡೆಸಿರುವ ಪ್ರಕಾಶ್ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments