Webdunia - Bharat's app for daily news and videos

Install App

ವಿಜಯಪುರದಲ್ಲಿ ಮತ್ತೆ ಮತ್ತೆ ಕೇಳಿಬರ್ತಿದೆ ಭೂಮಿಯೊಳಗಿಂದ ವಿಚಿತ್ರ ಶಬ್ದ

Webdunia
ಗುರುವಾರ, 2 ಸೆಪ್ಟಂಬರ್ 2021 (09:39 IST)
ವಿಜಯಪುರ: ಕಳೆದೊಂದು ತಿಂಗಳಿನಿಂದ ವಿಜಯಪುರ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಭೂಮಿಯಿಂದ ವಿಚಿತ್ರ ಶಬ್ದ ಕೇಳಿಬರುತ್ತಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.

ಬಸವನಬಾಗೇವಾಡಿ ತಾಲೂಕಿನ ಹುಣಸ್ಯಾಳ, ಕರಭಂಟ ಪಿಬಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಮಿಯಿಂದ ಭಾರೀ ಸದ್ದು ಕೇಳಿಬರುತ್ತಿದೆ. ಈ ಹಿಂದೆ ಕೂಡ ಕೆಲವು ಗ್ರಾಮಗಳಲ್ಲಿ ಇದೇ ರೀತಿ ಶಬ್ದ ಕೇಳಿಬಂದಿತ್ತು. ನಿನ್ನೆ ತಡರಾತ್ರಿ ಕೂಡ ಬಸನಬಾಗೇವಾಡಿ ತಾಲೂಕಿನ ಹಲವು ಗ್ರಾಮಗಳಲ್ಲಿ ಭಾರೀ ಶಬ್ದ ಕೇಳಿ ಬಂದಿರುವ ಕಾರಣ, ಭೂಕಂಪನದ ಆತಂಕದಿಂದ ಗ್ರಾಮಸ್ಥರು ಬೀದಿಯಲ್ಲೇ ರಾತ್ರಿ ಕಳೆದಿದ್ದಾರೆ.
ಭೂಮಿಯಿಂದ ಸದ್ದು ಕೇಳಿಬಂದ ಹಿನ್ನೆಲೆಯಲ್ಲಿ ಭೂಕಪಂನ ಆಗಿದೆ ಎಂದು ಭಯದಿಂದ ಮನೆಯಿಂದ ಹೊರಬಂದ ಗ್ರಾಮಸ್ಥರು ಬೀದಿಯಲ್ಲೇ ಆತಂಕದಿಂದ ರಾತ್ರಿ ಕಳೆದಿದ್ದಾರೆ. ಈ ಹಿಂದೆ ಜಿಲ್ಲೆಯ ಮಲಘಾಣ, ಮಸೂತಿ, ಅಡವಿ ಸಂಗಾಪುರ, ಮನಗೂಳಿ, ಉಕ್ಕಲಿ ಸೇರಿದಂತೆ ಹಲವೆಡೆ ಇದೇ ರೀತಿ ಶಬ್ದ ಉಂಟಾಗಿತ್ತು.
ಕಳೆದ ವರ್ಷ ಕೂಡ ಭೂಮಿ ಕಂಪಿಸುವುದರ ಜತೆಗೆ ಕೆಲವು ಮನೆಗಳು ಬಿರುಕು ಬಿಟ್ಟಿದ್ದವು. ಹಾಗೇ ಮೇಲ್ಚಾವಣಿಗಳಿಂದ ಮಣ್ಣು ಉದುರಿಬಿದ್ದಿದ್ದು, ಜನರೆಲ್ಲ ಮನೆಗಳಿಂದ ಹೊರಗೆ ಓಡಿ ಬಂದಿದ್ದರು. ಆಗ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದ ಭೂವಿಜ್ಞಾನಿಗಳು, ಇದು ಭೂಕಂಪವಲ್ಲ, ಭೂಮಿಯ ಪದರುಗಳ ಚಲನೆಯಿಂದ ಶಬ್ದ ಆಗಿದ್ದು ಎಂದು ತಿಳಿಸಿದ್ದರು. ಇದೀಗ ಅನೇಕ ಗ್ರಾಮಗಳಲ್ಲಿ ಹೀಗೆಯೇ ಆಗುತ್ತಿರುವುದು ಆತಂಕ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments