Webdunia - Bharat's app for daily news and videos

Install App

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗೆ ಹೆಚ್ಚಿದ ಬೇಡಿಕೆ

Webdunia
ಶುಕ್ರವಾರ, 26 ಮೇ 2023 (16:36 IST)
ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಬಿ ಪಿ ಎಲ್ ಕಾರ್ಡ್ ಗೆ  ಬೇಡಿಕೆ ಹೆಚ್ಚಾಗಿದೆ.ರಾಜ್ಯದಲ್ಲಿ ಪ್ರತಿದಿನ 500ಕ್ಕೂ ಹೆಚ್ಚು ಜನರಿಂದ ಅರ್ಜಿ ಸಲ್ಲಿಕೆ ಕುರಿತು ವಿಚಾರಣೆ  ನಡೆಯುತ್ತಿದೆ.ಸಿದ್ದರಾಮಯ್ಯ ಸರ್ಕಾರದ ಹಲವು ಭಾಗ್ಯ, ಗ್ಯಾರಂಟಿ ಘೋಷಣೆ ಹಿನ್ನೆಲೆ ಬಿಪಿಎಲ್ ಕಾರ್ಡ್ ಹೊಂದಿರಬೇಕು ಎಂಬ ಮಾನದಂಡ‌ ಕಾರಣದಿಂದ ಇದೀಗ ಸರ್ಕಾರದ ಉಚಿತ ಸ್ಕೀಂ ಪಡೆಯಲು ಮಧ್ಯಮ ವರ್ಗದ ಜನತೆ ಬಡ ಜನತೆ ಮುಗ್ಗಿ ಬಿದ್ದಿದೆ.ಕಳೆದೆರಡು ವರುಷದಿಂದ ಇಲ್ಲಿಯವರೆಗೆ 2.87 ಲಕ್ಷ ಬಿಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು.46,576 ಎಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಯಾಗಿದ್ದು,ಒಟ್ಟು 3.36 ಲಕ್ಷ BPL, APL ಕಾರ್ಡ್ ಅರ್ಜಿ ಸಲ್ಲಿಕೆಯಗಿದ್ದು,ಇಲ್ಲಿಯವರೆಗೆ 4 ಕೋಟಿ ಜನರಿಗೆ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹಂಚಿಕೆಯಾಗಿದೆ.
 
BPL ಕಾರ್ಡ್ ಗೆ ಡಿಮ್ಯಾಂಡ್ ಹೆಚ್ಚಾದ ಹಿನ್ನಲೆ ಇನ್ಮುಂದೆ BPL ಕಾರ್ಡ್ ನೀಡಲು ಹಣಕಾಸು ಇಲಾಖೆ ಅನುಮತಿ ಅಗತ್ಯ ಇದೆ.ರಾಷ್ಟ್ರೀಯ ಆಹಾರ ಹಕ್ಕು ಕಾಯಿದೆ ಮಿತಿ ತಲುಪಿರುವ ಕರ್ನಾಟಕ‌ ರಾಜ್ಯ ಕಳೆದ ಮೂರು ತಿಂಗಳ ಹಿಂದೆ‌ 1.5 ಲಕ್ಷ ಬಿಪಿಎಲ್ ಕಾರ್ಡ್ ಅನುಮತಿ ನೀಡಿದೆ.ಇನ್ನು ಬಾಕಿ ಉಳಿದ ಎರಡು ಲಕ್ಷ ಅರ್ಜಿಗೆ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕು.ಅನಾರೋಗ್ಯದಂಥ ಎಮರ್ಜೆನ್ಸಿ ಇದ್ರೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ.ಮತ್ತೊಂದು ಕಡೆ ಸರ್ಕಾರ ಘೋಷಣೆ ‌ಮಾಡಿರುವ ಉಚಿತ ಅಕ್ಕಿ ವಿತರಣೆ ಸ್ಕೀಂಗೆ ಮುಂದಿನ ತಿಂಗಳು ಎರಡನೇ ತಾರೀಖಿನವರೆಗೂ ಕಾರ್ಡ್ ನೀಡದಿರಲು ನಿರ್ಧಾರ ಮಾಡಲಾಗಿದೆ.ನಮಗೆ ಬಿಪಿಎಲ್ ಕಾರ್ಡ್ ಮಾಡಿಸಿಕೊಡಿ ಎಂದು ಅಧಿಕಾರಿಗಳಿಗೆ ಜನರು ಮನವಿಗಳ ಸುರಿಮಾಲೆಯೇ ಮಾಡ್ತಿದ್ದಾರೆ.
 
ಯಾವ ಯಾವ ಜಿಲ್ಲೆಯಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ
 
ಟಾಪ್ 5 ಬಿಪಿಎಲ್‌ ಕಾರ್ಡ್ ಅರ್ಜಿ ಸಲ್ಲಿಕೆಯಾದ ಜಿಲ್ಲೆಗಳು
ಬೆಳಗಾವಿ 27,411
ವಿಜಯಪುರ 17,228
ಬೆಂಗಳೂರು 12,765
ಬೀದರ್ 12,661
ರಾಯಚೂರು 12,498
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments