Webdunia - Bharat's app for daily news and videos

Install App

ಕೋಟ್ಯಂತರ ಮೌಲ್ಯದ ಐಶಾರಾಮಿ ಕಾರುಗಳು ಸಂಚರಿಸುತ್ತಿರುವ ಬಗ್ಗೆ ಸಿಸಿಬಿಗೆ ಮಾಹಿತಿ

Webdunia
ಮಂಗಳವಾರ, 19 ಅಕ್ಟೋಬರ್ 2021 (22:21 IST)
ಬೆಂಗಳೂರು: ಮಹಾನಗರದಲ್ಲಿ ರಸ್ತೆ ತೆರಿಗೆ ಪಾವತಿಸದೆ ಕೋಟ್ಯಂತರ ಮೌಲ್ಯದ ಐಶಾರಾಮಿ ಕಾರುಗಳು ಸಂಚರಿಸುತ್ತಿರುವ ಬಗ್ಗೆ ಸಿಸಿಬಿಗೆ ಮಾಹಿತಿ ಲಭ್ಯವಾಗಿದ್ದು, ಒಬ್ಬನನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ.
ಮರ್ಸಿಡೀಸ್ ಬೆನ್ಜ್, ಪೋರ್ಶೆ, ಜಾಗ್ವಾರ್, ಲ್ಯಾಂಬೋರ್ಗಿನಿ, ಬಿಎಂಡಬ್ಲ್ಯೂ, ಇನ್ನೋವಾ ಕ್ರಿಸ್ಟಾ ಸೇರಿದಂತೆ ಐಶಾರಾಮಿ ಕಾರುಗಳು ರಸ್ತೆ ತೆರಿಗೆ ಪಾವತಿಸದೆ ಸಂಚರಿಸುತ್ತಿರುವ ಬಗ್ಗೆ ಸಿಸಿಬಿಗೆ ಮಾಹಿತಿ ಸಿಕ್ಕಿದೆ. ರಸ್ತೆ ತೆರಿಗೆ ವಂಚನೆ ಜಾಲಾದಲ್ಲಿ ಭಾಗಿಯಾಗಿದ್ದ ಸ್ಮಾರ್ಟ್ ಕಾರ್ಡ್ ಕಂಪನಿ ಮ್ಯಾನೇಜರ್ ಒಬ್ಬನನ್ನು ಬಂಧಿಸಿದ್ದಾರೆ.
ರೋಸ್ ಮಾರ್ಟ್ ಕಂಪನಿ ರಾಜ್ಯಾದ್ಯಂತ ಆರ್​ಸಿ ಸ್ಮಾರ್ಟ್ ಕಾರ್ಡ್​ನ ಆರ್​ಟಿಓಗೆ ಪೂರೈಕೆ ಮಾಡುತ್ತಿದೆ. ಸಿಸಿಬಿ ತನಿಖೆ ವೇಳೆ ಈ ಔಟ್ ಸೋರ್ಸ್ ಕಂಪನಿಯ ಅಸಲಿಯತ್ತು ಬೆಳಕಿಗೆ ಬಂದಿದೆ. ರೋಸ್ ಮಾರ್ಟ್ ಕಂಪನಿ ಆರ್​ಟಿಓ ಅಧಿಕಾರಿಗಳಿಗೆ ಯಾಮಾರಿಸಿ ನಕಲಿ ನಂಬರ್ ಪ್ಲೇಟ್​ಗಳನ್ನು ನೀಡಿದೆ. ಇದೇ ರೀತಿ 27 ಕಾರುಗಳು ನಕಲಿ ನಂಬರ್ ಪ್ಲೇಟ್​ಗಳನ್ನ ಅಳವಡಿಸಿ ರಸ್ತೆಯಲ್ಲಿ ಓಡಾಡುತ್ತಿವೆ. ಓಡಾಡುತ್ತಿರುವ ಕಾರುಗಳೆಲ್ಲವೂ ಕೋಟ್ಯಾಂತರ ರೂಪಾಯಿ ಮೌಲ್ಯದ್ದು ಎಂದು ತಿಳಿದುಬಂದಿದೆ.
ಪ್ರಕರಣ ಬೆಳಕಿಗೆ ಬಂದಿದ್ದು ರೋಚಕ ಸಂಗತಿ:
ಆನಂದ್ ರಾಮ್ ಎಂಬ ವ್ಯಕ್ತಿ ತಮ್ಮ ಜಾಗ್ವಾರ್ ಕಾರಿಗೆ ಎನ್ಓಸಿ ಪಡೆದು ಕಾರನ್ನು ಕರ್ನಾಟಕ ರಿಜಿಸ್ಟ್ರೇಷನ್​ಗೆ ವರ್ಗಾವಣೆ ಮಾಡಲು ಬಂದಿದ್ದಾರೆ. ಆಗ ಕಾರನ್ನು ನಕಲಿ ನಂಬರ್​ನಲ್ಲಿ ರಿಜಿಸ್ಟರ್ ಮಾಡಿದ್ದಾರೆ ಅನ್ನೋದು ಗೊತ್ತಾಗಿದೆ. ದೂರು ಕೊಟ್ಟ ಬಳಿಕ ತನಿಖೆಗೆ ಇಳಿದ ಸಿಸಿಬಿಗೆ ಮತ್ತೊಂದು ಶಾಕ್ ಕಾದಿತ್ತು. ಪಶ್ಚಿಮ ಬಂಗಾಳದ ಡಬ್ಲ್ಯೂ ಬಿ 01 ಸೀರಿಸ್ ಅಲ್ಲಿ ಜಾಗ್ವಾರ್ ಕಾರನ್ನು ಇಲ್ಲಿ ರಿಜಿಸ್ಟರ್ ಮಾಡಿದ್ದರು. ಆದರೆ ಪಶ್ಚಿಮ ಬಂಗಾಳದಲ್ಲಿ ಡಬ್ಲ್ಯೂ ಬಿ 01 ಸೀರಿಸ್ ದ್ವಿಚಕ್ರ ವಾಹನಗಳಿಗೆ ನೀಡಿರುವುದಾಗಿ ಮಾಹಿತಿ ಇದೆ. ಇದೇ ರೀತಿ 27 ಐಷಾರಾಮಿ ಕಾರುಗಳನ್ನು ನಕಲಿ ನಂಬರ್ ಪ್ಲೇಟ್​ನಲ್ಲಿ ಚಲಾಯಿಸುತ್ತಿರುವ ಬಗ್ಗೆ ಮಾಹಿತಿ ಸಿಸಿಬಿಗೆ ಲಭ್ಯವಾಗಿದೆ.
ವಂಚನೆಯಲ್ಲಿ ಆರ್​ಟಿಒ ಅಧಿಕಾರಿಗಳ ಪಾಲುದಾರಿಕೆ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸಿಸಿಬಿ ತನಿಖೆ ಚುರುಕುಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments